Ad imageAd image

ಅರಣ್ಯದಲ್ಲಿ ದನ, ಕುರಿ ಮೇಯಿಸುವುದು ನಿಷೇಧ : ಈಶ್ವರ್ ಖಂಡ್ರೆ ಆದೇಶ

Bharath Vaibhav
ಅರಣ್ಯದಲ್ಲಿ ದನ, ಕುರಿ ಮೇಯಿಸುವುದು ನಿಷೇಧ : ಈಶ್ವರ್ ಖಂಡ್ರೆ ಆದೇಶ
Khandre
WhatsApp Group Join Now
Telegram Group Join Now

ಬೆಂಗಳೂರು: ಅರಣ್ಯದಲ್ಲಿ ದನ, ಮೇಯಿಸುವುದನ್ನು ನಿಷೇಧಿಸಲು ಮಾಡಿ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿರುವ ಎಲ್ಲಾ ಅರಣ್ಯ ಪ್ರದೇಶದೊಳಗೆ ದನ, ಕರು, ಮೇಕೆ, ಹಾಗೂ ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ  ಸಚಿವ ಈಶ್ವರ್ ಖಂಡ್ರೆ ಸೂಚನೆ  ನೀಡಿದ್ದಾರೆ.

ಜಾನುವಾರುಗಳನ್ನು ಮೇಯಲು ಬಿಡುವುದರಿಂದ ಆಗಷ್ಟೇ  ಸಸಿಗಳು ಸಾಕು ಪ್ರಾಣಿಗಳಿಗೆ ಆಹಾರವಾಗಿ ಅರಣ್ಯದಲ್ಲಿ ಹೊಸ ಗಿಡಗಳು ಬೆಳೆಯದೆ ಅರಣ್ಯ ಸಂವರ್ಧನೆಗೆ ಅಡ್ಡಿಯಾಗಿದೆ.ಈ ಬಗ್ಗೆ ಪರಿಸರ ಪ್ರೇಮಿಗಳು ಅರಣ್ಯ ವರ್ಧನೆಗೆ ಅಡ್ಡಿಯಾಗುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ದೊಡ್ಡ ಸಂಖ್ಯೆಯಲ್ಲಿ  ಕಾಡಿನಲ್ಲಿ ಮೇಯುವುದರಿಂದ ಕಾಡಿನಲ್ಲಿರುವ ಸಸ್ಯಹಾರಿ ಪ್ರಾಣಿಗಳಿಗೂ ಮೇವಿನ ಕೊರತೆ ಉಂಟಾಗುತ್ತಿದೆ. ಮಿಗಿಲಾಗಿ ಊರಿನಿಂದ ಕಾಡಿಗೆ ಮೇಯಲು ಹೋಗುವ ಪ್ರಾಣಿಗಳಿಂದ ವನ್ಯಜೀವಿಗಳು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಸಾಧ್ಯತೆ ಇದೆ.

ಅರಣ್ಯ ಸಂವರ್ಧನೆಯಾಗದಿದ್ದರೆ ನದಿಗಳ ಮೇಲೆಯೂ ಪರಿಣಾಮ ಬೀರುತ್ತದೆ. ಹೀಗಾಗಿ ಅರಣ್ಯ ಪ್ರದೇಶದಲ್ಲಿ ಜಾನುವಾರು ಮೇಯುವುದನ್ನು ನಿಷೇಧಿಸುವ ಬಗ್ಗೆ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ ಎನ್ನಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!