ಬೆಂಗಳೂರು : ರಾಜ್ಯಾದ್ಯಂತ ಭ್ರಷ್ಟಕುಳಗಳಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ 30 ಕ್ಕೂ ಹೆಚ್ಚು ಕಡೆ ಅಧಿಕಾರಿಗಳು ಏಕಕಾಲದಲ್ಲಿ. ರೇಡ್ ಮಾಡಿದ್ದಾರೆ.
ಬಿಲ್ಡರ್ ಗಳು , ರಿಯಲ್ ಎಸ್ಟೇಟ್ ಉದ್ಯಮಿಗಳು , ಏಜೆoಟ್ ಗಳ ಆಫೀಸ್ ಹಾಗೂ ಮನೆಗಳ ಮೇಲೆ ದಾಳಿ ಮಾಡಲಾಗಿದೆ.ಅಕ್ರಮ ಹಣ ವರ್ಗಾವಣೆ ಹಾಗೂ ಆಸ್ತಿ ಸಂಪಾದನೆ ಆರೋಪಗಳು ಕೇಳಿಬಂದ ಹಿನ್ನೆಲೆ ರೇಡ್ ಮಾಡಲಾಗಿದೆ.
ದಾಳಿ ವೇಳೆ ಮಹತ್ವದ ದಾಖಲಾತಿಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇನ್ನೂ ಸಹ ಪರಿಶೀಲನೆ ನಡೆಸಲಾಗಿದೆ. ದಾಳಿಯಲ್ಲಿ ಹಿರಿಯ ಅಧಿಕಾರಿಗಳು ನೇತೃತ್ವ ವಹಿಸಿದ್ದು , ಸಂಪೂರ್ಣ ತಲಾಶ್ ಮಾಡಲಾಗುತ್ತಿದೆ. ದೆಹಲಿ, ಚೆನೈ, ಗೋವಾ,ಕೋಲ್ಕತ್ತಾದಿಂದ ಅಧಿಕಾರಿಗಳು ಬಂದಿದ್ದಾರೆ. ಬೆಳಗ್ಗೆ 5 ಗಂಟೆಗೆ ಐಟಿ ಅಧಿಕಾರಿಗಳ ದಾಳಿ ನಡೆಸಿದ್ದು ಭ್ರಷ್ಟರಿಗೆ ಐಟಿ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.