Ad imageAd image

ಜಾತ್ರೆಯಲ್ಲಿ ಭಾಗಿಯಾಗಿ ಕುಸ್ತಿ ಪಂದ್ಯ ವಿಕ್ಷೀಸಿದ ಜಗದೀಶ್ ಶೆಟ್ಟರ್

Bharath Vaibhav
ಜಾತ್ರೆಯಲ್ಲಿ ಭಾಗಿಯಾಗಿ ಕುಸ್ತಿ ಪಂದ್ಯ ವಿಕ್ಷೀಸಿದ ಜಗದೀಶ್ ಶೆಟ್ಟರ್
WhatsApp Group Join Now
Telegram Group Join Now

ಬೆಳಗಾವಿ:  ತಾಲೂಕಿನ ಯಳ್ಳುರು ಗ್ರಾಮದಲ್ಲಿ ರಾಷ್ಟ್ರಮಟ್ಟದ ಕುಸ್ತಿ ಪಂದ್ಯ ಆಯೋಜನೆ ಮಾಡಲಾಗಿದ್ದು, ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಜಗದೀಶ್ ಶೆಟ್ಟರ್ ಅವರು ಭಾಗಿ ಆಗಿ ಕುಸ್ತಿ ಪಂದ್ಯ ವೀಕ್ಷಿಸಿದರು.‌ ಈ ವೇಳೆ ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ್ ಕವಟಗಿಮಠ ಸಾಥ್ ನೀಡಿದರು.

ಗುರುವಾರ ಸಾಯಂಕಲಾ ಯಳ್ಳುರು ಗ್ರಾಮದ ಹೊರ ವಲಯದಲ್ಲಿ ಚಾಂಗಳೇಶ್ವರ ದೇವಿ ಮತ್ತು ಕಲ್ಮೇಶ್ವರ್ ದೇವರ ಜಾತ್ರೆ ನಿಮಿತ್ತ ಆಯೋಜನೆ ಮಾಡಲಾಗಿದ್ದ ರಾಷ್ಟ್ರಮಟ್ಟದ ಕುಸ್ತಿ ಪಂದ್ಯವನ್ನು ಜಗದೀಶ್ ಶೆಟ್ಟರ್ ಅವರು ವಿಕ್ಷಣೆ ಮಾಡಿದರು.‌ ಇದಕ್ಕಿಂತ ಮುಂಚೆ ಯಳ್ಳರು ಗ್ರಾಮದಲ್ಲಿರುವ ಚಾಂಗಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದರು.

ಈ ಒಂದು ಕುಸ್ತಿ ಪಂದ್ಯದಲ್ಲಿ ಕರ್ನಾಟಕ, ಹರಿಯಾಣ, ಪಂಜಾಬ, ದೆಹಲಿ, ಮಾಹಾರಾಷ್ಟ್ರ ಸೇರಿದಂತೆ ಅನೇಕ ರಾಜ್ಯದ ಕುಸ್ತಿಪಟುಗಳು ಭಾಗ ವಹಿಸಿದರು. ಜಗದೀಶ್ ಶೆಟ್ಟರ್ ಅವರು ಭೇಟಿ ನೀಡಿದ ವೇಳೆ ಸಾಂಪ್ರದಾಯಕ ವಾದ್ಯಗಳನ್ನು ನುಡಿಸುವ ಮೂಲಕ ಭವ್ಯವಾಗಿ ಸ್ವಾಗತ ಕೋರಲಾಯಿತು.‌

ವರದಿ :- ಪ್ರತೀಕ ಚಿಟಗಿ

WhatsApp Group Join Now
Telegram Group Join Now
Share This Article
error: Content is protected !!