Ad imageAd image

ಬೆಳಗಾವಿಯ ಸಮಗ್ರ ಅಭಿವೃದ್ಧಿಗೆ ಕಂಕಣಬದ್ಧವಾಗಿ ದುಡಿಯುತ್ತೇನೆ : ಜಗದೀಶ್ ಶಟ್ಟರ್

Bharath Vaibhav
WhatsApp Group Join Now
Telegram Group Join Now

ನಿಮ್ಮ ಪ್ರತಿನಿಧಿಯಾಗಿ ಬೆಳಗಾವಿಯ ಸಮಗ್ರ ಅಭಿವೃದ್ಧಿಗೆ ಕಂಕಣಬದ್ಧವಾಗಿ ದುಡಿಯುತ್ತೇನೆ ಎಂದು ಬೆಳಗಾವಿ ಲೋಕಸಭಾ ಚುನಾವಣಾ ಅಭ್ಯರ್ಥಿ ಜಗದೀಶ್ ಶಟ್ಟರ್ ಹೆಳಿದರು.

ಲೋಕಸಭಾ ಚುನಾವಣೆ ಅಂಗವಾಗಿ ಬೆಳಗಾವಿಯ ಭಾಗ್ಯನಗರದ ರಾಮನಾಥ ಮಂಗಲ ಕಾರ್ಯಾಲಯದಲ್ಲಿ ಜರುಗಿದ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಬೂತ್ ಸಮಾವೇಶದಲ್ಲಿ ಭಾಗವಹಿಸಿ, ಸಮಾವೇಶ ಉದ್ದೇಶಿಸಿ ಮಾತನಾಡಿದರು.

ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜೀ ಅವರ ಸಾಧನೆಗಳ ಕುರಿತು ಮಾತನಾಡಿ, ನಿಮ್ಮ ಪ್ರತಿನಿಧಿಯಾಗಿ ಬೆಳಗಾವಿಯ ಸಮಗ್ರ ಅಭಿವೃದ್ಧಿಗೆ ಕಂಕಣಬದ್ಧವಾಗಿ ದುಡಿಯುತ್ತೇನೆ ಎಂದು ಪ್ರಮಾಣ ಮಾಡಿದರು.

ಈ ಸಂದರ್ಭದಲ್ಲಿ ಮಹಾನಗರ ಅಧ್ಯಕ್ಷರಾದ ಶ್ರೀಮತಿ ಗೀತಾ ಸುತಾರ, ಸಂಸದರಾದ ಶ್ರೀ ಮಂಗಳಾ ಸುರೇಶ ಅಂಗಡಿ, ಶಾಸಕರಾದ ಶ್ರೀ ಅಭಯ್ ಪಾಟೀಲ, ಮಾಜಿ ವಿಧಾನಪರಿಷತ್ ಸದಸ್ಯರಾದ ಶ್ರೀ ಮಹಾಂತೇಶ ಕವಟಗಿಮಠ, ಉಪ ಮಹಾಪೌರರಾದ ಶ್ರೀ ಆನಂದ ಚೌವ್ಹಾಣ, ದಕ್ಷಿಣ ಮಂಡಲ ಅಧ್ಯಕ್ಷರಾದ ಶ್ರೀ ಪ್ರಶಾಂತ ಕಂಗ್ರಾಳಕರ ಹಾಗೂ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ : ಪ್ರತೀಕ ಚಿಟಗಿ

WhatsApp Group Join Now
Telegram Group Join Now
Share This Article
error: Content is protected !!