Ad imageAd image
- Advertisement -  - Advertisement -  - Advertisement - 

ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಹನುಮಂತರಾಜು ಹುಟ್ಟುಹಬ್ಬದ ನಿಮಿತ್ತ ಪೌರ ಕಾರ್ಮಿಕರಿಗೆ ಜರ್ಕಿನ್ಮ,ಕ್ಕಳಿಗೆ ನೋಟ್ ಬುಕ್ ವಿತರಣೆ

Bharath Vaibhav
ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಹನುಮಂತರಾಜು ಹುಟ್ಟುಹಬ್ಬದ ನಿಮಿತ್ತ ಪೌರ ಕಾರ್ಮಿಕರಿಗೆ ಜರ್ಕಿನ್ಮ,ಕ್ಕಳಿಗೆ ನೋಟ್ ಬುಕ್ ವಿತರಣೆ
WhatsApp Group Join Now
Telegram Group Join Now

ಬೆಂಗಳೂರು: –ಪೀಣ್ಯ ದಾಸರಹಳ್ಳಿ ದಾಸರಹಳ್ಳಿ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಪ್ರಧಾನ ಕಾರ್ಯದರ್ಶಿ, ಶ್ರೀರಾಮ ಟೂರ್ಸ್ ಮತ್ತು ಟ್ರಾವೆಲ್ಸ್ ಮಾಲೀಕ ಹನುಮಂತರಾಜು ರವರ ಹುಟ್ಟು ಹಬ್ಬದ ಪ್ರಯುಕ್ತ ರಾಜಗೋಪಾಲನಗರ ವಾರ್ಡಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಶ್ರೀ ಪರಮ ಪೂಜ್ಯ ಹನುಮಂತನಾಥ ಮಹಾ ಸ್ವಾಮೀಜಿಗಳು ಕುಂಚಿಟಿಗರ ಮಹಾ ಸಂಸ್ಥಾನ ಮಠ ಶ್ರೀ ನರಸಿಂಹಗಿರಿ ಸುಕ್ಷೇತ್ರ ಎಲೆರಾಮಪುರವರು ಸಾನಿಧ್ಯವಹಿಸಿ ಪೌರಕಾರ್ಮಿಕರಿಗೆ ಜರ್ಕಿನ್, ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ ಮಾಡುವ ಮೂಲಕ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ವಿನೂತನವಾಗಿ ಆಚರಿಸಲಾಯಿತು.

ಇದೆ ವೇಳೆ ಪರಮ ಪೂಜ್ಯ ಹನುಮಂತನಾಥ ಮಹಾ ಸ್ವಾಮೀಜಿಗಳಿಗೆ ಹನುಮಂತರಾಜು ಮತ್ತು ಅವರ ಧರ್ಮಪತ್ನಿ ಕುಟುಂಬದ ಸದಸ್ಯರು ಶ್ರೀಗಳಿಗೆ ಪಾದ ಪೂಜೆ ನೆರವೇರಿಸಿ ಶ್ರೀಗಳಿಂದ ಆಶಿರ್ವಾದ ಪಡೆದರು.
ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಹಿರಿಯ ಉಪಾಧ್ಯಕ್ಷ ಅಂದಾನಪ್ಪ, ಜಯಣ್ಣ, ದಾಸರಹಳ್ಳಿ ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಮುನಿಸ್ವಾಮಿ, ಅರ್ಪಿತಾ ಸೇವಾ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಹಾಗೂ ಲಗ್ಗೆರೆ ವಾರ್ಡಿನ ಕಾಂಗ್ರೆಸ್ ಪ್ರಭಾವಿ ಮುಖಂಡ ಲಗ್ಗೆರೆ ನಾರಾಯಣಸ್ವಾಮಿ, ಬಿಜೆಪಿ ಮುಖಂಡ ಹಾಗೂ ಕೈಗಾರಿಕೋದ್ಯಮಿ ದಿನೇಶ್ ಜಿಕೆಡಬ್ಲೂ ಲೇಔಟ್, ಕಂಪ್ಯೂಟರ್ ವಿಜಿ, ಕಾಂಗ್ರೆಸ್ ಪ್ರಭಾವಿ ಮುಖಂಡ ರುದ್ರೇಗೌಡ್ರು, ಮೋಹನ್ ಖ್ಯಾತ ಜಾನಪದ ಗಾಯಕ ಕುಣಿಗಲ್ ರಾಮಚಂದ್ರ, ಹನುಮಂತರಾಜು ಅವರ ಅಭಿಮಾನಿಗಳು ಜೆಡಿಎಸ್ ಮುಖಂಡರು ಮಹಿಳೆಯರು ಕಾರ್ಯಕರ್ತರು ಸಮಸ್ತ ನಾಗರಿಕ ಬಂಧು ಭಗನಿಯರು ಇದ್ದು ಹನುಮಂತರಾಜು ರವರಿಗೆ ಸಿಹಿ ತಿನ್ನಿಸಿ ಹುಟ್ಟುಹಬ್ಬದ ಶುಭ ಹಾರೈಸಿದರು.

ವರದಿ:- ಅಯ್ಯಣ್ಣ ಮಾಸ್ಟರ್

WhatsApp Group Join Now
Telegram Group Join Now
Share This Article
error: Content is protected !!