Ad imageAd image

ರಾಜಗೋಪಾಲ ನಗರ ವಾರ್ಡಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಜಂಟಿ ಸಭೆ

Bharath Vaibhav
WhatsApp Group Join Now
Telegram Group Join Now

ಬೆಂಗಳೂರು:- ಪೀಣ್ಯ ದಾಸರಹಳ್ಳಿ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ರಾಜಗೋಪಾಲ ನಗರ ವಾರ್ಡಿನ ಬಿಜೆಪಿ ಮತ್ತು ಜೆಡಿಎಸ್ ಮುಖಂಡರ ಜಂಟಿ ಸಭೆಯನ್ನು ಹೆಗ್ಗನಹಳ್ಳಿ ಮುಖ್ಯ ರಸ್ತೆಯಲ್ಲಿರುವ ಶಾಸಕ ಎಸ್ ಮುನಿರಾಜು ಅವರ ಸಂಪರ್ಕ ಕಚೇರಿಯಲ್ಲಿ ಮಾಜಿ ಪಾಲಿಕೆ ಸದಸ್ಯ ಎಚ್ ಎನ್ ಗಂಗಾಧರ್, ಜೆಡಿಎಸ್ ಮುಖಂಡ ನರಸಿಂಹಮೂರ್ತಿ (ಸಿಂಹ),ರಾಜಗೋಪಾಲ ನಗರ ವಾರ್ಡಿನ ಬಿಜೆಪಿ ಅಧ್ಯಕ್ಷ ನರಸಿಂಹಮೂರ್ತಿ,ಮಾಜಿ ಅಧ್ಯಕ್ಷ ನಾಗೇಶ್ ಮತ್ತು ಮೋಹನ್ ಕುಮಾರ್ ಇವರುಗಳ ನೇತೃತ್ವದಲ್ಲಿ ಆಯೋಜಿಸಲಾಗಿತ್ತು.

ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಸೋಮಶೇಖರ್ ಮಾತನಾಡಿ ಬಿಜೆಪಿ ಜೆಡಿಎಸ್ ಒಂದಾಗಿದ್ದು ನಮ್ಮೇಲ್ಲರಿಗೂ ಖುಷಿ ತಂದಿದೆ ನಾವೆಲ್ಲರೂ ಒಟ್ಟಾಗಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರನ್ನು ಗೆಲ್ಲಿಸುವುದೆ ನಮ್ಮ ನಿಮ್ಮ ಗುರಿಯಾಗಿದೆ ಎಲ್ಲರೂ ಇಂದಿನಿಂದಲೇ ಭೂತ್ ಮಟ್ಟದಿಂದ ಕಾರ್ಯ ನಿರ್ವಹಿಸಬೇಕು ಎಂದು ಬಿಜೆಪಿ ಜೆಡಿಎಸ್ ಮುಖಂಡರಿಗೆ ಸಲಹೆ ನೀಡಿ ಮಾತನಾಡಿದರು.

ಮಾಜಿ ಪಾಲಿಕೆ ಸದಸ್ಯ ಹಾಗೂ ತೋಟಗಾರಿಕೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಎಚ್ ಎನ್ ಗಂಗಾಧರ್ ಮಾತನಾಡಿ ಮತ್ತೋಮ್ಮೆ ಮೋದಿ ಪ್ರಧಾನಿ ಮಾಡಲು ನಾವುಗಳು ಕಟಿಬದ್ಧವಾಗಿದೆ ಶ್ರಮವಹಿಸಿ ಎನ್ ಡಿಎ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸುವ ಶಕ್ತಿ ತಮ್ಮಲ್ಲಿದೆ ಎಂದು ಭೂತ್ ಮಟ್ಟದಿಂದ ಪ್ರಮುಖರನ್ನು ಉದ್ದೇಶಿಸಿ ಅವರು ಮಾತನಾಡಿದರು.

ರಾಜಗೋಪಾಲ ನಗರ ವಾರ್ಡಿನ ಬಿಜೆಪಿ ಅಧ್ಯಕ್ಷ ನರಸಿಂಹಮೂರ್ತಿ ಮಂಗಳ ವಾಟರ್ ಸರ್ವರಿಗೂ ಸ್ವಾಗತಿಸಿದರು.ಈ ಸಂದರ್ಭದಲ್ಲಿ ರಾಜಗೋಪಾಲ ನಗರ ವಾರ್ಡಿನ ಬಿಜೆಪಿ ಮುಖಂಡ ದಿನೇಶ್, ವಿಜಯಕುಮಾರ್ ಕಂಪ್ಯೂಟರ್, ಜೆಡಿಎಸ್ ಹಿಂದುಳಿದ ವರ್ಗಗಳ ಅಧ್ಯಕ್ಷ ಹಾಗೂ ರಾಮಯ್ಯ ಬಡಾವಣೆಯ ಹಿರಿಯ ಮುಖಂಡ ಶಿವಣ್ಣ, ಡಬಲ್ ರಾಮಣ್ಣ, ಬಿಜೆಪಿ ಮಾಜಿ ಅಧ್ಯಕ್ಷರಾದ ಹರೀಶ್, ಸೋಮಶೇಖರ್ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಮಹಿಳೆಯರು ಕಾರ್ಯಕರ್ತರು ಮುಂತಾದವರು ಇದ್ದರು.

ವರದಿ:- ಅಯ್ಯಣ್ಣ ಮಾಸ್ಟರ್

WhatsApp Group Join Now
Telegram Group Join Now
Share This Article
error: Content is protected !!