Ad imageAd image
- Advertisement -  - Advertisement -  - Advertisement - 

ಕೆಎಎಎಸ್ ಪೂರ್ವಭಾವಿ ಪರೀಕ್ಷೆಯಲ್ಲಿ ಎಡವಟ್ಟು : ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಪ್ರತಿಭಟನೆ

Bharath Vaibhav
ಕೆಎಎಎಸ್ ಪೂರ್ವಭಾವಿ ಪರೀಕ್ಷೆಯಲ್ಲಿ ಎಡವಟ್ಟು : ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಪ್ರತಿಭಟನೆ
WhatsApp Group Join Now
Telegram Group Join Now

ಬೆಂಗಳೂರು : ಕೆಪಿಎಸ್ ಸಿಯ ಕೆಎಎಎಸ್ ಪೂರ್ವಭಾವಿ ಪರೀಕ್ಷೆಯಲ್ಲಿ ಎಡವಟ್ಟು ನಡೆದಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಅಭ್ಯರ್ಥಿಗಳು ಪ್ರತಿಭಟನೆ ನಡೆಸಿರುವ ಘಟನೆ ವರದಿಯಾಗಿದೆ.

ಬೆಳಗಾವಿಯ ಅಂಜುಮನ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಅಲ್ಲದೇ ಪ್ರಶ್ನೆ ಪತ್ರಿಕೆ ಕೊಡಲು 15 ನಿಮಿಷ ತಡ ಮಾಡಲಾಗಿದೆ.ಒಎಂಆರ್ ಶೀಟ್ ಕೂಡ ಅದಲು ಬದಲಾಗಿದೆ ಎಂದು ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ವಿಚಾರ ತಿಳಿದ ಕೂಡಲೇ ಬೆಳಗಾವಿ ಜಿಲ್ಲಾ‍ಧಿಕಾರಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಪರೀಕ್ಷೆ ಬರೆಯಲು ಹೆಚ್ಚುವರಿ ಸಮಯ ಕೊಡುತ್ತೇವೆ ಎಂದು ಹೇಳಿದ ಬಳಿಕ ಪರೀಕ್ಷೆ ಆರಂಭವಾಗಿದೆ. ಕರ್ನಾಟಕ ಲೋಕಸೇವಾ ಆಯೋಗದ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆ ಆಗಸ್ಟ್ 27 ರಂದು ಇಂದು ನಡೆಯುತ್ತಿದೆ.

WhatsApp Group Join Now
Telegram Group Join Now
Share This Article
error: Content is protected !!