Ad imageAd image

ಮೊದಲು ಕನ್ನಡಿಗರ ಕ್ಷಮೆ ಕೇಳಿ : ಕಮಲ್ ಹಾಸನ್ ಗೆ ಹೈಕೋರ್ಟ್ ಚಾಟಿ 

Bharath Vaibhav
ಮೊದಲು ಕನ್ನಡಿಗರ ಕ್ಷಮೆ ಕೇಳಿ : ಕಮಲ್ ಹಾಸನ್ ಗೆ ಹೈಕೋರ್ಟ್ ಚಾಟಿ 
WhatsApp Group Join Now
Telegram Group Join Now

ಬೆಂಗಳೂರು : ಥಗ್‌ ಲೈಫ್‌ ಸಿನಿಮಾ ಬಿಡುಗಡೆ ಅಡ್ಡಿಯನ್ನು ತೆರವು ಮಾಡುವಂತೆ ಕಮಲ್‌ ಹಾಸನ್‌ ಹಾಗೂ ಸಿನಿಮಾ ನಿರ್ಮಾಣ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಿಚಾರಣೆಗೊಳಪಡಿಸಿದೆ.

ಮೊದಲು ಕನ್ನಡಿಗರ ಕ್ಷಮೆ ಕೇಳಿ ಬಳಿಕ ಅರ್ಜಿ ವಿಚಾರಣೆ ನಡೆಸುತ್ತೇವೆ ಎಂದು ಹೈಕೋರ್ಟ್‌ ನ್ಯಾಯಮೂರ್ತಿ ಕಮಲ್‌ ಹಾಸನ್‌ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಸರ್ಕಾರದ ಪರವಾಗಿ ನ್ಯಾಯವಾದಿ ಭಾನುಪ್ರಕಾಶ್‌ ವಾದಿಸಿದರು.

ಕಮಲ್‌ ಹಾಸನ್‌ ಯಾರೇ ಇರಲಿ ನೆಲ ಜಲ ವಿಚಾರದಲ್ಲಿ ರಾಜಿ ಇಲ್ಲ ಎಂದು ನ್ಯಾಯಮೂರ್ತಿಗಳು ಕನ್ನಡಮ್ಮನ ಪರವಾಗಿ ನಿಂತು ಭಾಷಾ ಪ್ರೇಮ ಮೆರೆದರು. ಕಮಲ್‌ ಹಾಸನ್‌ ಅವರನ್ನು ತರಾಟೆಗೆ ತೆಗೆದುಕೊಂಡ ನ್ಯಾ.ನಾಗ ಪ್ರಸನ್ನ ಯಾವುದೋ ಭಾಷೆಯಿಂದ ಕನ್ನಡ ಹುಟ್ಟಿದೆ ಎಂದರೆ ಹೇಗೆ? ಇಂದಿನ ಪರಿಸ್ಥಿತಿಗೆ ಕಮಲ್‌ ಹಾಸನ್‌ ನೇರ ಕಾರಣ. ಮೊದಲು ಆ ಬಗ್ಗೆ ಕ್ಷಮೆ ಕೇಳಿ. ಬಳಿಕ ನಿಮ್ಮ ಅರ್ಜಿಯನ್ನು ಪರಿಗಣಿಸುತ್ತೇವೆ ಎಂದು ಹೇಳಿದ್ದಾರೆ.

ಸಿನಿಮಾ ಬಿಡುಗಡೆಗೆ ತೊಂದರೆ ಆಗುತ್ತದೆ ಎಂದು ಅರ್ಜಿ ಹಾಕಿದ್ದೀರಾ. ನನಗೆ ತಲೆಯಲ್ಲಿ ಬುದ್ದಿ ಇಲ್ಲದೇ ಆ ರೀತಿ ಮಾತನಾಡಿದೆ ಎಂದು ಕನ್ನಡಿಗರ ಕ್ಷಮೆ ಕೇಳಿ . ಈ ಹಿಂದೆ ರಾಜಗೋಪಾಲಾಚಾರಿ ಕ್ಷಮೆ ಕೇಳಿದ್ದರು. ಬಳಿಕ ಪರಿಸ್ಥಿತಿ ತಣ್ಣಗಾಯ್ತು ಎಂದು ನ್ಯಾಯಮೂರ್ತಿ ಕಮಲ್‌ ಹಾಸನ್‌ ಅವರ ಮುಖದಲ್ಲಿ ನೀರಿಳಿಸಿದರು.

ಥಗ್‌ ಲೈಫ್‌ ಸಿನಿಮಾ ಪ್ರಚಾರದ ವೇಳೆ ಕಮಲ್‌ಹಾಸನ್‌ ತಮಿಳು ಭಾಷೆಯಿಂದಲೇ ಕನ್ನಡ ಹುಟ್ಟಿದೆ ಎಂಬ ಅಸಂಬದ್ಧ ಹೇಳಿಕೆ ನೀಡಿದ್ದರು. ಇದಕ್ಕೆ ಕನ್ನಡಿಗರೂ ಹಾಗೂ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ಥಗ್‌ ಲೈಫ್‌ ಸಿನಿಮಾ ಬಿಡುಗಡೆ ನಿಷೇಧ ಹೇರಿತ್ತು.

ಈ ಮೂಲಕ ಹೈಕೋರ್ಟ್‌ ಕನ್ನಡಿಗರ ಹೋರಾಟಕ್ಕೆ ಪರೋಕ್ಷ ಬೆಂಬಲ ನೀಡಿರುವುದಲ್ಲದೇ, ತಮಿಳು ಪಾರಮ್ಯ ಮೆರೆಯುತ್ತಿರುವ ಭಾಷಾಂಧರ ಸುಳ್ಳು ಪ್ರತಿಷ್ಠೆಯನ್ನು ತೊಡೆದುಹಾಕಿದೆ.

WhatsApp Group Join Now
Telegram Group Join Now
Share This Article
error: Content is protected !!