Ad imageAd image

ಕೇಜ್ರಿವಾಲ್ ಅವರಿಗೆ ಜಾಮೀನು ಸಿಕ್ಕಿದೆ ಎಂದ ಮಾತ್ರಕ್ಕೆ, ಕ್ಲೀನ್ ಚಿಟ್ ಸಿಕ್ಕಿಲ್ಲ : ಅಮಿತ್ ಶಾ 

Bharath Vaibhav
ಕೇಜ್ರಿವಾಲ್ ಅವರಿಗೆ ಜಾಮೀನು ಸಿಕ್ಕಿದೆ ಎಂದ ಮಾತ್ರಕ್ಕೆ, ಕ್ಲೀನ್ ಚಿಟ್ ಸಿಕ್ಕಿಲ್ಲ : ಅಮಿತ್ ಶಾ 
AMITH SHA
WhatsApp Group Join Now
Telegram Group Join Now

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ಸಿಕ್ಕಿದೆ ಎಂದ ಮಾತ್ರಕ್ಕೆ ಆರೋಪ ಪ್ರಕರಣದಿಂದ ಅವರಿಗೆ ಕ್ಲೀನ್ ಚಿಟ್ ಸಿಕ್ಕಿಲ್ಲ ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ.

ಹೈದರಾಬಾದ್ ನಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದ ಅವರು ಈ ಕುರಿತಂತೆ ಮಾತನಾಡಿ, ಅರವಿಂದ್ ಕೇಜ್ರಿವಾಲ್ ಅವರಿಗೆ ತಾತ್ಕಾಲಿಕ ರಿಲೀಫ್ ಮಾತ್ರ ಸಿಕ್ಕಿದೆ ಎಂದು ತಿಳಿಸಿದರು.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅತ್ಯಧಿಕ ಸ್ಥಾನ ಗಳಿಸಿ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗುವುದು ಖಚಿತ ಎಂದ ಅಮಿತ್ ಶಾ, ನಾವು ನಿರೀಕ್ಷಿಸಿದಷ್ಟು ಸ್ಥಾನಗಳನ್ನು ಗಳಿಸುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

WhatsApp Group Join Now
Telegram Group Join Now
Share This Article
error: Content is protected !!