Ad imageAd image

ಚಿಂಚೋಳಿಯಲ್ಲಿ ಕಿತ್ತೂರಾಣಿ ಚೆನ್ನಮ್ಮನ ಜಯಂತಿ

Bharath Vaibhav
ಚಿಂಚೋಳಿಯಲ್ಲಿ ಕಿತ್ತೂರಾಣಿ ಚೆನ್ನಮ್ಮನ ಜಯಂತಿ
WhatsApp Group Join Now
Telegram Group Join Now

ಚಿಂಚೋಳಿ: ಕಲಬುರಗಿ ಜಿಲ್ಲೆಯ ಚಿಂಚೋಳಿ ಪಟ್ಟಣದ ಚಂದಾಪುರದ ರೈತ ಸಂಪರ್ಕ ಕೇಂದ್ರ ಹತ್ತಿರ ಚೆನ್ನಮ್ಮ ವೃತ್ತದಲ್ಲಿ ತಾಲೂಕ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಆಚರಣೆ ಮಾಡಲಾಯಿತು ಕಾರ್ಯಕ್ರಮವನ್ನು ಚಿಂಚೋಳಿ ತಹಸಿಲ್ದಾರ್ ಸುಬ್ಬಣ್ಣ ಜಮಖಂಡಿ,ರವರ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಭಾವಚಿತ್ರಕ್ಕೆ ಪೂಜಿಸಿ ಪುಷ್ಪ ನಮನ ಮಾಡಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಕಿತ್ತೂರು ರಾಣಿ ಚೆನ್ನಮ್ಮನವರು ಭಾರತ ದೇಶಕ್ಕಾಗಿ ಬ್ರಿಟಿಷ್ ವಿರುದ್ಧ ಹೋರಾಟ ಮಾಡಿದಂತ ವೀರವನತೆ ಕಿತ್ತೂರು ರಾಣಿ ಚೆನ್ನಮ್ಮ ಆದರ್ಶಗಳನ್ನು ನಾವೆಲ್ಲರೂ ಪಾಲಿಸಬೇಕು ಎಂದು ಹೇಳಿದರು ಕಾರ್ಯಕ್ರಮದಲ್ಲಿ ತಾಲೂಕ ಪಂಚಾಯತಿ ಇ ಒ ಶಂಕರ್ ರಾಠೋಡ್, ಗ್ರೇಟ್ 2 ತಹಸಿಲ್ದಾರ್ ವೆಂಕಟೇಶ್ ದುಗ್ಗನ್, ತಾಲೂಕ ಆರೋಗ್ಯ ಇಲಾಖೆ ಅಧಿಕಾರಿಗಳಾದ ಡಾ.ಮಹಮ್ಮದ್ ಗಫರ್, ವೀರಶೈವ ಲಿಂಗಾಯತ ಸಮಾಜದ ತಾಲೂಕ ಅಧ್ಯಕ್ಷರಾದ ಸಂಜೀವಕುಮಾರ್ ಪಾಟೀಲ್,ರಮೇಶ್ ಪಡಶೆಟ್ಟಿ,ವೀರೇಶ್ ದೇಸಾಯಿ,ರವೀಂದ್ರ,ಮತ್ತು ವಿವಿಧ ಇಲಾಖೆ ಅಧಿಕಾರಿಗಳು,ಕನ್ನಡ ಪರ ಸಂಘಟನೆ ಅಧ್ಯಕ್ಷರು ಮತ್ತು ಅನೇಕ ವೀರಶೈವ ಲಿಂಗಾಯತ ಸಮಾಜದ ಬಾಂಧವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು

ವರದಿ : ಸುನೀಲ್ ಸಲಗರ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!