Ad imageAd image

ಕು. ಶೋಭಾ ಕರಂದ್ಲಾಜೆ ಗೆಲುವು ಗೆಲುವಿನಿಂದ ಪೀಣ್ಯ2ನೆ ಹಂತದಲ್ಲಿ ಬಿಜೆಪಿ ಮುಖಂಡರಿಂದ ವಿಜಯೋತ್ಸವ ಸಂಬ್ರಮ

Bharath Vaibhav
WhatsApp Group Join Now
Telegram Group Join Now

ಬೆಂಗಳೂರು :- ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್ ಮುನಿರಾಜು ಅವರ ಮಾರ್ಗದರ್ಶನದಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿ ಕು.ಶೋಭಾ ಕರಂದ್ಲಾಜೆ ಅವರು ಪ್ರಚಂಡ ಬಹುಮತದಿಂದ ಜಯಗಳಿಸಿದಕ್ಕೆ ರಾಜಗೋಪಾಲನಗರ ವಾರ್ಡಿನ ಬಿಜೆಪಿ ಅಧ್ಯಕ್ಷ ನರಸಿಂಹಮೂರ್ತಿ ಮಂಗಳ ವಾಟರ್, ಬಿಜೆಪಿ ಮುಖಂಡ ದಿನೇಶ್ ಮತ್ತು ಬಿಜೆಪಿ ಮಾಜಿ ಅಧ್ಯಕ್ಷ ನಾಗೇಶ್ ಇವರುಗಳ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಮಹಿಳೆಯರು ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಶಾಸಕ ಎಸ್ ಮುನಿರಾಜು, ಶೋಭಾ ಕರಂದ್ಲಾಜೆ, ಬಿ ವೈ ವಿಜೇಂದ್ರ, ಕುಮಾರ್ ಸ್ವಾಮಿ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ , ಜಗದೀಶ್ ಶೆಟ್ಟರ್, ಪ್ರದಾನಿ ನರೇಂದ್ರ ಮೋದಿ, ಅಮಿತ್ ಷಾ ಹೀಗೆ ಬಿಜೆಪಿ ನಾಯಕರ ಹೆಸರುಗಳ ಘೋಷಣೆ ಕೂಗುತ್ತ ವಿಜಯೋತ್ಸವ ಆಚರಿಸಿದರು.

ಈ ಸಂದರ್ಭದಲ್ಲಿ ಹಿರಿಯ ಮುಖಂಡ ಡಬಲ್ ರಾಮಣ್ಣ, ಕಂಪ್ಯೂಟರ್ ವಿಜಯ, ವೈ.ಜಿ ನಾಗರಾಜ್, ಏಳುಮಲೈ, ಶ್ರೀಶೈಲ್ ಸೇರಿದಂತೆ ಬಿಜೆಪಿ ಮುಖಂಡರು ಮಹಿಳೆಯರು ಕಾರ್ಯಕರ್ತರು ಮುಂತಾದವರು ಕುಣಿದು ಕುಪ್ಪಳಿಸಿ ವಿಜಯೋತ್ಸವ ಆಚರಿಸಿದರು.

ವರದಿ:-ಅಯ್ಯಣ್ಣ ಮಾಸ್ಟರ್

WhatsApp Group Join Now
Telegram Group Join Now
Share This Article
error: Content is protected !!