Ad imageAd image

ಶಾಸಕರಿಂದ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ

Bharath Vaibhav
ಶಾಸಕರಿಂದ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ
WhatsApp Group Join Now
Telegram Group Join Now

ಚೇಳೂರು : ಸಾರ್ವಜನಿಕರಿಗೆ ಉತ್ತಮ ರಸ್ತೆ ವ್ಯವಸ್ಥೆ ಕುಡಿಯುವ ನೀರಿನ ಸಮಸ್ಯೆ ಸಾರಿಗೆ ವಿದ್ಯುತ್ ಶಿಕ್ಷಣ ಸೇರಿದಂತೆ ಗ್ರಾಮೀಣ ಭಾಗದ ಎಲ್ಲ ಜನರಿಗೆ ಮೂಲ ಸೌಕರ್ಯ ಒದಗಿಸಿ ಕೊಡಲು ನಿರಂತರ ಶ್ರಮಿಸುವದಾಗಿ ಶಾಸಕ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಹೇಳಿದರು.

ತಾಲೂಕಿನ ಪಾಳ್ಯಕೆರೆ ಗ್ರಾಮದಿಂದ ರಾಮೋಜಿಪಲ್ಲಿ ಕ್ರಾಸ್ ವರೆಗೂ ರಾಜ್ಯ ಹೆದ್ದಾರಿ ನವೀಕರಣ ಯೋಜನೆಯಡಿ ೦೫ ಕೋಟಿ ರೂ. ಅಂದಾಜಿನಲ್ಲಿ ರಸ್ತೆ ಅಭಿವದ್ಧಿ ಕಾಮಗಾರಿಗೆ ಸೋಮವಾರ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು ಗಡಿ ಭಾಗದ ಗ್ರಾಮಗಳವರೆಗೆ ಸಾರಿಗೆ ವ್ಯವಸ್ಥೆ ಹಾಗೂ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ರಸ್ತೆ ಅಭಿವದ್ಧಿಗೊಳಿಸಲಾಗುತ್ತಿದ್ದು ಇದು ಹೆದ್ದಾರಿ ಸೇರಲಿದೆ.ಈ ಭಾಗದ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ.

ಗುತ್ತಿಗೆದಾರರು ಗುಣ ಮಟ್ಟದ ರಸ್ತೆ ನಿರ್ಮಾಣ ಮಾಡುವ ಮೂಲಕ ಹೆಚ್ಚು ದಿನ ಬಾಳಿಕೆ ಬರುವಂತಾಗಬೇಕು. ನಿಗದಿತ ಅವಧಿಗೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದರು. ಗಡಿ ಭಾಗಕ್ಕೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು.

ನಂತರ ಪಾಳ್ಯಕೆರೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಲಕ್ಷ್ಮಿ ವೆಂಕಟರವಣ ಸ್ವಾಮಿ ದೇವಾಲಯದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗದ್ದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಶ್ರೀನಿವಾಸಲು ನಾಯುಡು,ಪಿಡಿಒ ಇನಾಯತ್ ಬಾಷಾ,ಹಿರಿಯ ಕಾಂಗ್ರೆಸ್ ಮುಖಂಡರು ಪಿ.ಆರ್. ಚಲಂ,dss ಜಿಲ್ಲಾ ಸಂಚಾಲಕರಾದ ಕಡ್ಡಿಲು ವೆಂಕಟರವಣಪ್ಪ,ಜೆ.ಎನ್ ಜಾಲಾರಿ, ಸುರೇಂದ್ರ,ಗುತ್ತಿಗೆದಾರ ಮಂಜುನಾಥ ರೆಡ್ಡಿ ಸೇರಿದಂತೆ ಇತರರು ಹಾಜರಿದ್ದರು.

ವರದಿ :ಯಾರಬ್. ಎಂ.

WhatsApp Group Join Now
Telegram Group Join Now
Share This Article
error: Content is protected !!