Ad imageAd image

ಎಸ್ ಎಂ ಕೃಷ್ಣ ಇನ್ನಿಲ್ಲ ಎಂಬ ಊಹಾಪೋಹ : ಮಣಿಪಾಲ ವೈದ್ಯರ ಸ್ಪಷ್ಟನೆ

Bharath Vaibhav
ಎಸ್ ಎಂ ಕೃಷ್ಣ ಇನ್ನಿಲ್ಲ ಎಂಬ ಊಹಾಪೋಹ : ಮಣಿಪಾಲ ವೈದ್ಯರ ಸ್ಪಷ್ಟನೆ
SM KRISHNA
WhatsApp Group Join Now
Telegram Group Join Now

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಆರೋಗ್ಯ ಚಿಂತಾಜನಕವಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ. ಇನ್ನೇನು ಇನ್ನಿಲ್ಲ ಎಂದೆಲ್ಲ ಹೇಳಲಾಗುತ್ತಿತ್ತು. ಆದ್ರೇ ಮಾಜಿ ಸಿಎಂ ಎಸ್ ಎಂ ಕೃಷ್ಣ ಆರೋಗ್ಯ ಸ್ಥಿರವಾಗಿದೆ ಎಂಬುದಾಗಿ ಮಣಿಪಾಲ್ ಆಸ್ಪತ್ರೆಯ ವೈದ್ಯರು ಸ್ಪಷ್ಟ ಪಡಿಸಿದ್ದಾರೆ.

ಇಂದು ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಆರೋಗ್ಯದ ಬಗ್ಗೆ ಮಣಿಪಾಲ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ. ಅವರ ಆರೋಗ್ಯ ಸ್ಥಿರವಾಗಿದೆ. ಯಾವುದೇ ಗಂಭೀರ ಸ್ಥಿತಿಯನ್ನು ತಲುಪಿಲ್ಲ ಎಂಬುದಾಗಿ ತಿಳಿಸಿದೆ.

ಮಣಿಪಾಲ್ ಆಸ್ಪತ್ರೆಯ ಡಾ.ಸತ್ಯನಾರಾಯಣ, ಡಾ.ಸುನೀಲ್ ಕಾರಂತ್ ಅವರ ನೇೃತ್ವದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದ ಬಗ್ಗೆಯೂ ನಿಗಾ ವಹಿಸಲಾಗಿದೆ.

ಅವರು ಆರೋಗ್ಯ ಸ್ಥಿತಿಯಲ್ಲಿ ಗಂಭೀರವಾಗಿ ಎಂಬುದು ಸುಳ್ಳು. ಅವರು ಇನ್ನಿಲ್ಲ ಎಂಬುದು ಸತ್ಯಕ್ಕೆ ದೂರವಾದದ್ದು ಆಗಿದೆ. ಆ ಬಗ್ಗೆ ಯಾರು ಆತಂಕಕ್ಕೆ ಒಳಗಾಗಬಾರದು ಎಂಬುದಾಗಿ ಸ್ಪಷ್ಟ ಪಡಿಸಿದೆ.

WhatsApp Group Join Now
Telegram Group Join Now
Share This Article
error: Content is protected !!