Join The Telegram | Join The WhatsApp |
ಹುಬ್ಬಳ್ಳಿ,: ಡಿಸೆಂಬರ್, 22: ಗಾಲಿ ಜನಾರ್ದನ ರೆಡ್ಡಿ ಹಾಗೂ ನನ್ನ ಸ್ನೇಹ ಯಾವತ್ತೂ ಶಾಶ್ವತವಾಗಿರುತ್ತದೆ. ಬಿಜೆಪಿ ನನಗೆ ರಾಜಕೀಯ ಸ್ಥಾನಮಾನ ಕೊಟ್ಟಿದೆ. ನಾನು ಸ್ನೇಹವನ್ನೂ ಬಿಡಲ್ಲ, ರಾಜಕಾರಣವನ್ನು ಬಿಡಲ್ಲ. ಕೇಂದ್ರದ ನಾಯಕರ ಜೊತೆ ಈ ಬಗ್ಗೆ ಮಾತನಾಡಿದ್ದೇನೆ.
ನಮಗೆ ಬಿಜೆಪಿಯಲ್ಲಿ ಗೌರವ, ಸ್ಥಾನಮಾನ ಸಿಕ್ಕಿದೆ ಎಂದು ಸಚಿವ ಬಿ.ಶ್ರೀರಾಮುಲು ಹುಬ್ಬಳ್ಳಿಯಲ್ಲಿ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿಂದು ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪನೆ ವಿಚಾರವಾಗಿ ಮಾತನಾಡಿದ ಅವರು, ಜನಾರ್ದನ ರೆಡ್ಡಿ ಅವರು ಹೊಸ ಪಕ್ಷ ಸ್ಥಾಪನೆಯ ಬಗ್ಗೆ ಯಾವತ್ತೂ ಮಾತನಾಡಿಲ್ಲ. ಕೇವಲ ಸಾರ್ವಜನಿಕ ಜೀವನದಲ್ಲಿ ಬೆರೆಯಬೇಕು ಎಂದುಕೊಂಡಿದ್ದಾರೆ. ಜನಾರ್ಧನ ರಡ್ಡಿ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳುವ ಕೆಲಸ ಬಿಜೆಪಿ ಮಾಡುತ್ತದೆ ಎನ್ನುವ ವಿಶ್ವಾಸ ಇದೆ ಎಂದರು.
ಸದನದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳ ವಿಚಾರವಾಗಿ ಮಾತನಾಡಿದ ಅವರು, ಬಿಲ್ ಮಂಡನೆ ಆಗುತ್ತಿದೆ. ವಿಪಕ್ಷದ ಸದಸ್ಯರು ಚರ್ಚೆಯಲ್ಲಿ ಭಾಗಿಯಾಗಬೇಕು. ಸಿದ್ದರಾಮಯ್ಯ ಅವರು ಚರ್ಚೆಗೆ ಅವಕಾಶ ಕೊಡದೇ ಬಿಲ್ ಪಾಸ್ ಆಗಲು ಸಹಕಾರ ಕೊಡಬೇಕು. ಈ ವಿಚಾರದಲ್ಲಿ ನಮ್ಮ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಳ್ಳಬೇಕು ಎನ್ನುವ ನಿರ್ಧಾರದಲ್ಲಿದೆ. ಇದೇ ವಿಚಾರವಾಗಿ ಸುಗ್ರೀವಾಜ್ಞೆ ಹೊರಡಿಸಿದ್ದೇವೆ. ಸದನದಲ್ಲಿ ತೀರ್ಮಾನವಾದ ನಂತರ ಶೆಡ್ಯೂಲ್ 9ರಲ್ಲಿ ಕೇಂದ್ರಕ್ಕೆ ಕಳುಹಿಸಲಾಗುತ್ತದೆ. ಸದನದಲ್ಲಿ ವಿಪಕ್ಷಗಳು ಸಮಯವನ್ನು ವ್ಯರ್ಥ ಮಾಡುತ್ತಿವೆ ಎಂದು ಹೇಳಿದರು.
ನಿನ್ನೆ, ಮೊನ್ನೆಯಷ್ಟೇ ನಡೆದ ಸದನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆ ಆಗಬೇಕಿತ್ತು. ಸಣ್ಣ ಸಣ್ಣ ಕಾರಣಗಳು ಜಗಳವಾಡಿ ದಿನ ಹಾಳು ಮಾಡುತ್ತಿದ್ದಾರೆ. ಪಂಚಮಸಾಲಿ ಮೀಸಲಾತಿ ಹೋರಾಟ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನಮ್ಮೆಲ್ಲ ಹಿರಿಯರು ಸೇರಿ ಈ ಬಗ್ಗೆ ಒಳ್ಳೆಯ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಎಂದರು.
Join The Telegram | Join The WhatsApp |