Ad imageAd image

ಹೆಬ್ಬಾಳ್ಕರ್ ಕ್ಷಮೆ ಕೇಳಿದ ಸಿದ್ದರಾಮಯ್ಯ : ಸಚಿವೆ ಭಾವುಕ 

Bharath Vaibhav
ಹೆಬ್ಬಾಳ್ಕರ್ ಕ್ಷಮೆ ಕೇಳಿದ ಸಿದ್ದರಾಮಯ್ಯ : ಸಚಿವೆ ಭಾವುಕ 
WhatsApp Group Join Now
Telegram Group Join Now

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕ್ಷಮೆ ಕೇಳಿದ್ದಾರೆ. ಈ ಸಂದರ್ಭದಲ್ಲಿ ಲಕ್ಷ್ಮೀ ಭಾವುಕರಾಗಿದ್ದು ಕಂಡು ಬಂದಿತು.

ಸಿಎಂ ಸಿದ್ದರಾಮಯ್ಯ ಅವರ ಭೇಟಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಚಿವ ಸತೀಶ್ ಜಾರಕಿಹೊಳಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಆಗಮಿಸಿದ್ದರು.ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಾರಿ ಕಣಮ್ಮ ಎಂದು ಹೇಳಿದರು.

ಮಗನ ಸೋಲಿನ ನೋವಿನಲ್ಲಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಒಂದು ಕ್ಷಣ ಭಾವುಕರಾದರು. ಕೆಲ ಹೊತ್ತು ಮೌನಕ್ಕೂ ಶರಣಾದರು. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಜಗದೀಶ ಶೆಟ್ಟರ್ ವಿರುದ್ಧ ಸೋಲು ಕಂಡಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!