Ad imageAd image
- Advertisement -  - Advertisement -  - Advertisement - 

ಗ್ಯಾರಂಟಿ ಯೋಜನೆಗಳಿಗೆ ಎಸ್‌ ಸಿ-ಎಸ್‌ ಟಿ ಸಮುದಾಯದ 24 ಸಾವಿರ ಕೋಟಿ ರೂ. ಹಣ ದುರ್ಬಳಕೆ

Bharath Vaibhav
ಗ್ಯಾರಂಟಿ ಯೋಜನೆಗಳಿಗೆ ಎಸ್‌ ಸಿ-ಎಸ್‌ ಟಿ ಸಮುದಾಯದ 24 ಸಾವಿರ ಕೋಟಿ ರೂ. ಹಣ ದುರ್ಬಳಕೆ
govind karjol
WhatsApp Group Join Now
Telegram Group Join Now

ಬಾಗಲಕೋಟೆ : ರಾಜ್ಯ ಕಾಂಗ್ರೆಸ್‌ ಸರ್ಕಾರವು ಗ್ಯಾರಂಟಿ ಯೋಜನೆಗಳಿಗಾಗಿ ಎಸ್‌ ಸಿ, ಎಸ್ ಟಿ ಸಮುದಾಯದ ಹಣ ಬಳಕೆ ಮಾಡಿಕೊಳ್ಳುತ್ತಿದೆ ಎಂದು ಸಂಸದ ಗೋವಿಂದ ಕಾರಜೋಳ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಆಗುತ್ತಿಲ್ಲ.ಹಣ ವಾಪಸ್‌ ತೆಗೆದುಕೊಂಡಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ನಮ್ಮ ಆಕ್ಷೇಪಣೆ ಇಲ್ಲ. ಗ್ಯಾರಂಟಿ ಯೋಜನೆ ಮೂಲಕ ವೋಟ್‌ ಬ್ಯಾಂಕ್‌ ರಾಜಕಾರಣ ಮಾಡಬಾರದು ಎಂದು ವಾಗ್ದಾಳಿ ನಡೆಸಿದ್ದಾರೆ.

ಎಸ್‌ ಸಿ-ಎಸ್‌ ಟಿ ಸಮುದಾಯದ 24 ಸಾವಿರ ಕೋಟಿ ರೂ. ಹಣ ದುರ್ಬಳಕೆ ಆಗಿದೆ. ಆ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಂಡಿದ್ದಾರೆ. ಎಸ್‌ ಸಿ, ಎಸ್‌ ಟಿ ಸಮುದಾಯದ ಕಲ್ಯಾಣಕ್ಕೆ ಇರುವ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಬಾರದು ಎಂದು ಹೇಳಿದ್ದಾರೆ.

 

WhatsApp Group Join Now
Telegram Group Join Now
Share This Article
error: Content is protected !!