Mk ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಕಿತ್ತೂರು ಕ್ಷೇತ್ರದ Mk ಹುಬ್ಬಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಣೆ ಮಾಡುವ ಎಲ್ಲಾ ಪೌರಕಾರ್ಮಿಕರಿಂದ ಬಾಕಿ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪಟ್ಟಣ ಪಂಚಾಯಿತಿ ಕಟ್ಟಡದ ಮುಂದೆ ಎಲ್ಲಾ ಪೌರಕಾರ್ಮಿಕರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಮುಖ್ಯ ಅಧಿಕಾರಿಗಳು ಆದ ಶಿವಶಂಕರ್ ಮಾಸ್ತಿಹೊಳಿ ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪ್ರಕಾಶ್ ಕೊಡ್ಲಿ, ಮಂಜು ಕಡಕೊಳ ಅವರಿಗೆ ಎಲ್ಲಾ ಪೌರಕಾರ್ಮಿಕ ಸಿಬ್ಬಂದಿಗಳು ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ಸಹ ಇವರ ಹೋರಾಟಕ್ಕೆ ಬೆಂಬಲ ಕೊಟ್ಟು ನಂತರ ಇವರ ಅಭಿಪ್ರಾಯದ ಸಮಗ್ರ ವರದಿ ತಯಾರಿಸಿ ಬೆಳಕು ಚೆಲ್ಲುವ ಕೆಲಸ ಮಾಡಿದ್ದಾರೆ. ಇನ್ನಾದ್ರೂ ಈ ಪೌರಕಾರ್ಮಿಕರ ಸಮಸ್ಯೆಗಳು ಈಡೇರಬಹುದೇ ಎಂಬುದನ್ನು ಕಾದುನೋಡಬೇಕಿದೆ.
ವರದಿ:ಬಸವರಾಜು




