Ad imageAd image

ಪರಪ್ಪನ ಅಗ್ರಹಾರ ಜೈಲು ಸೇರಿದ ಶಾಸಕ ಮುನಿರತ್ನ 

Bharath Vaibhav
ಪರಪ್ಪನ ಅಗ್ರಹಾರ ಜೈಲು ಸೇರಿದ ಶಾಸಕ ಮುನಿರತ್ನ 
WhatsApp Group Join Now
Telegram Group Join Now

ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಮುನಿರತ್ನ, ಇದೀಗ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.

ಜೀವ ಬೆದರಿಕೆ, ಜಾತಿ ನಿಂದನೆ ಕೇಸ್ ನಲ್ಲಿ ಎರಡು ದಿನ ಪೊಲೀಸ್ ಕಷ್ಟಡಿಗೆ ಪಡೆದಿದ್ದ ಪೊಲೀಸರು, ಇಂದು ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ 82ನೇ ಸಿಸಿಹೆಚ್ ಕೋರ್ಟ್ ಗೆ ಹಾಜರು ಪಡಿಸಿದ್ದರು.

ಈ ವೇಳೆ ಮುನಿರತ್ನ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.ಆದರೆ ಕೋರ್ಟ್ ಒಂದು ದಿನದವರೆಗೆ ಮುನಿರತ್ನ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.

ನ್ಯಾಯಾಂಗ ಬಂಧನ ಹಿನ್ನೆಲೆಯಲ್ಲಿ ಪೊಲೀಸರು ಮುನಿರತ್ನ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಿದ್ದು, ಮುನಿರತ್ನ ಜೈಲು ಸೇರಿದ್ದಾರೆ. ನಾಳೆ ಮುನಿರತ್ನ ಅವರಿಗೆ ಜಾಮೀನು ಸಿಗಲಿದೆಯೇ? ಕಾದು ನೋಡಬೇಕಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!