Ad imageAd image

ಸಿದ್ದರಾಮಯ್ಯರನ್ನು ಕೆಳಗಿಳಿಸಲು ಅಜೆಂಡಾ ರೆಡಿಯಾಗಿದೆ. : ಶಾಸಕ ಯತ್ನಾಳ್ 

Bharath Vaibhav
ಸಿದ್ದರಾಮಯ್ಯರನ್ನು ಕೆಳಗಿಳಿಸಲು ಅಜೆಂಡಾ ರೆಡಿಯಾಗಿದೆ. : ಶಾಸಕ ಯತ್ನಾಳ್ 
YATNAL
WhatsApp Group Join Now
Telegram Group Join Now

ಧಾರವಾಡ: ಲೊಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ನಾಯಕರು ಅಬ್ಬರದ ಪ್ರಚಾರ ನಡೆಸುತ್ತಿದ್ದು, ಮತದಾರರ ಓಲೈಕೆಗಾಗಿ ನಾನಾ ಕಸರತ್ತು ನಡೆಸಿದ್ದಾರೆ. ಈ ನಡುವೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿರುವ ಹೇಳಿಕೆ ಭಾರಿ ಚರ್ಚೆಗೆ ಕಾರಣವಾಗಿದೆ.

ಸಿಎಂ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಅಜೆಂಡಾ ರೆಡಿಯಾಗಿದೆ. ಕಾಂಗ್ರೆಸ್ ನಾಯಕರೇ ಅಜೆಂಡಾ ಸಿದ್ಧ ಮಾಡಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಶಿವಾನಂದ ಪಾಟೀಲ್ ಈ ಬಗ್ಗೆ ಕಾನ್ಫರೆನ್ಸ್ ಕಾಲ್ ನಲ್ಲಿ ಮಾತನಾಡಿದ್ದಾರೆ ಎಂದು ಹೇಳಿದ್ದಾರೆ.

ಒಬ್ಬರು ಸ್ವಾಮೀಜಿ ಜೊತೆ ಡಿ.ಕೆ.ಶಿವಕುಮಾರ್, ಶಿವಾನಂದ ಪಾಟೀಲ್ ಕಾನ್ಫರೆನ್ಸ್ ಕಾಲ್ ನಲ್ಲಿ ಮಾತನಾಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರೇ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ವ್ಯವಸ್ಥಿತವಾಗಿ ತಂತ್ರ ರೂಪಿಸುತ್ತಿದ್ದಾರೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!