Join The Telegram | Join The WhatsApp |
ಬೆಂಗಳೂರು ದಕ್ಷಿಣ ಲೋಕಸಭಾ ಸಂಸದ ತೇಜಸ್ವಿ ಸೂರ್ಯ ಅವರು ಡಿಸೆಂಬರ್ 10, 2022ರಂದು ಚೆನ್ನೈ ವಿಮಾನ ನಿಲ್ದಾಣದಲ್ಲಿ ಯಾವುದೇ ಅನುಮತಿಯಿಲ್ಲದೆ ವಿಮಾನದ ತುರ್ತು ನಿರ್ಗಮನವನ್ನು ತೆರೆದಿದ್ದಾರೆ ಎಂದು ಆರೋಪಿಸಲಾಗಿದೆ.
ಇದೀಗ ಈ ಪ್ರಕರಣ ತಡವಾಗಿ ಬೆಳಿಕಿಗೆ ಬಂದಿದೆ. ಇದರಿಂದ ವಿಮಾನಯಾನ 2 ತಾಸು ತಡವಾಗಿದೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.
ಈ ಬಗ್ಗೆ ವಿಮಾನಯಾನ ಸಂಸ್ಥೆ ಇಂಡಿಗೋ ಯಾವುದೇ ಹೇಳಿಕೆಯನ್ನು ಬಿಡುಗಡೆ ಮಾಡಲು ನಿರಾಕರಿಸಿದೆ.
ತಿರುವನಂತಪುರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಸಂಸದ ತೇಜಸ್ವಿ ಸೂರ್ಯ ತುರ್ತು ದ್ವಾರ ತೆರೆದು ಆತಂಕ ಸೃಷ್ಟಿಸಿದ್ದಾರೆ.
ಇದು ಪ್ರಯಾಣಿಕರಲ್ಲಿ ತೀವ್ರ ಭಯ ಮತ್ತು ಆತಂಕ ಉಂಟುಮಾಡಿತು. ಈ ಘಟನೆಯು ಕಳೆದ ವರ್ಷ ಡಿಸೆಂಬರ್ 10ರಂದೇ ಸಂಭವಿಸಿದೆ ಎಂದು ವರದಿಯಾಗಿದೆ. ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಈಗ ಈ ವಿಷಯದ ಬಗ್ಗೆ ತನಿಖೆಗೆ ಆದೇಶಿಸಿದೆ.
ಪ್ರಯಾಣಿಕರು ಇಂಡಿಗೋ 6E ವಿಮಾನದಲ್ಲಿ (6E-7339) ಪ್ರಯಾಣಿಸುತ್ತಿದ್ದರು. ಅದು ಚೆನ್ನೈನಿಂದ ಟೇಕ್ ಆಫ್ ಆಗಿತ್ತು. ತಿರುವನಂತಪುರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ತೇಜಸ್ವಿ ಸೂರ್ಯ ತುರ್ತು ಬಾಗಿಲು ತೆರೆದು ವಿಮಾನದಲ್ಲಿದ್ದ ಪ್ರಯಾಣಿಕರಲ್ಲಿ ಭಯ ಮೂಡಿಸಿದ್ದರು.
ಅದಾದ ಒಂದು ತಿಂಗಳ ನಂತರ, ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಜಿಡಿಸಿಎ) ಈ ಬಗ್ಗೆ ತನಿಖೆಗೆ ಆದೇಶಿಸಿದೆ.
“ಡಿಸೆಂಬರ್ 10 ರಂದು, ಇಂಡಿಗೋ 6E ಫ್ಲೈಟ್ 6E-7339 ಚೆನ್ನೈನಿಂದ ತಿರುವನಂತಪುರಕ್ಕೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರಲ್ಲಿ ಭಯವನ್ನುಂಟುಮಾಡುವ ಮೂಲಕ ಪ್ರಯಾಣಿಕರೊಬ್ಬರು ತುರ್ತು ಬಾಗಿಲು ತೆರೆದಿದ್ದರು. DGCA ಈ ವಿಷಯದ ಬಗ್ಗೆ ತನಿಖೆಗೆ ಆದೇಶಿಸಿದೆ” ಎಂದು DGCA ಹೇಳಿದೆ.
Join The Telegram | Join The WhatsApp |