ಸೇಡಂ:- ತಾಲೂಕಿನ ಮುಧೋಳ್ ಗ್ರಾಮದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಸೇರಿ ಸಾಕ್ಷಮ್ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ಈ ಕಾರ್ಯಕ್ರಮದ ಮುಖ್ಯ ಅಥಿತಿಗಳಾಗಿ ಅಜೀಮ್ ಜಿ ಪ್ರೇಮ್ ಜಿ ಫೌಂಡೇಷನ್ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶರಣು ಅವರು ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕರು ಪ್ರಿಯಾಂಕ್ ಮತ್ತು ರವಿ ಭಾಗಿಯಾಗಿದ್ದರು.
ಈ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಂದ ರಂಗೋಲಿ ಸ್ಪರ್ಧೆ ಮತ್ತು ರಸಪ್ರಶ್ನೆ ಕಾರ್ಯಕ್ರಮ ಹಾಡು ಅಭಿನಯ ಗೀತೆಗಳು ಡ್ಯಾನ್ಸ್ ಸೇರಿದಂತೆ ಇನ್ನಿತರ ಆಟಗಳನ್ನು ಮಾಡಿಸಿಲಾಯಿತು.ಈ ಸಂದರ್ಭದಲ್ಲಿ ಮುಧೋಳ್ ಗ್ರಾಮದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮುದ್ದು ಮಕ್ಕಳು ಭಾಗಿಯಾಗಿದ್ದರು.
ವರದಿ:- ವೆಂಕಟಪ್ಪ ಕೆ ಸುಗ್ಗಾಲ್.