ಸೇಡಂ: ತಾಲೂಕಿನ ಮಳಖೇಡ ಆಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆ ಮತ್ತು ಮಳಖೇಡ ಪೋಲಿಸ್ ವತಿಯಿಂದ ರಾಷ್ಟ್ರೀಯ ಏಕತಾ ದಿನದ ನಿಮಿತ್ಯ ಓಟವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಸಿಪಿಐ ಮಹದೇವಪ್ಪ ದಿಡ್ಡಿಮನಿ ಅವರು ಚಾಲನೆ ನೀಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಸೇಡಂ ಸಿಪಿಐ ಮಹದೇವಪ್ಪ ದಿಡ್ಡಿಮನಿ, ಪಿಎಸ್ಐ ಉಪೇಂದ್ರ ಕುಮಾರ್, ಎಬಿಪಿಎಸ್ ಶಾಲೆಯ ಪ್ರಾಂಶುಪಾಲರು ಹಾಗೂ ಸಿಬ್ಬಂದಿಗಳು, ಮತ್ತು ಪೊಲೀಸ್ ಸಿಬ್ಬಂದಿ ಮತ್ತು ಸೆಕ್ಯೂರಿಟಿ ಅಧಿಕಾರಿಗಳು ಪ್ರದೀಪ್, ಸುನಿಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ವರದಿ: ವೆಂಕಟಪ್ಪ ಕೆ ಸುಗ್ಗಾಲ್




