Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಒಳ ಮೀಸಲಾತಿ ಜಾರಿಗಾಗಿ ಅರೆಬೆತ್ತಲೆ ಉರುಳು ಸೇವೆ, ಸರಕಾರದ ವಿರುದ್ದ ಹರಿಹಾಯ್ದ ಮಾದಿಗರು

Advertisement


ಗೋಕಾಕ : ಕಳೆದ ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಮಾದಿಗ ಒಳಮಿಸಲಾತಿ ಜಾರಿಗೆ ಆಗ್ರಹಿಸಿ ಗೋಕಾಕ ತಾಲೂಕಾ ನೂರಾರು ಮಾದಿಗರು ನಗರದಲ್ಲಿ ಅರೆಬೆತ್ತಲೆಯಾಗಿ ಉರುಳು ಸೇವೆ ಮಾಡಿ ಭಾರಿ ಪ್ರತಿಭಟನೆ ನಡೆಸಿದರು.

ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ತಹಸಿಲ್ದಾರ ಕಚೇರಿವರೆಗೆ ಅರೆಬೆತ್ತಲೆ ಮೆರವಣಿಗೆ ಮಾಡಿ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಭಾರಿ ಪ್ರತಿಬಟನೆ ಮಾಡಿದರು.



ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ದಲಿತ ಮುಖಂಡ ಸತೀಶ ಹರಿಜನ ಒಳಮೀಸಲಾತಿಯನ್ನು ಜಾರಿ ಮಾಡುತ್ತೇವೆಂದು ಕುಂಟು ನೆಪ ಹೆಳುತ್ತಾ ಬಂದಿದ್ದಾರೆ, ಇನ್ನೆನು ಜಾರಿಯಾಗುವ ಸಂದರ್ಭದಲ್ಲಿ ನಮ್ಮ ಬಕಗೈ ಸಮುದಾಯದವರು ವಿರೋದ ಮಾಡಿದರು,ಕೂಡಲೇ ಜಾರಿ ಮಾಡದೇ ಇದ್ದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಮಾದಿಗರು ಕುಟುಂಬ ಸಮೇತ ಅಸಹಕಾರ ಚಳವಳಿಯನ್ನು ಮಾಡುತ್ತೇವೆ ಎಂದು ಎಚ್ಚರಿಸಿದರು.

ಇನ್ನೊರ್ವ ದಲಿತ ಮುಖಂಡ ಈಶ್ವರ ಗುಡಜ ಇವರು ಕಾಂಗ್ರೇಸ್ ಸರಕಾರ ದಲಿತರ ಪಕ್ಷ ಎಂದು ನಂಬಿಕೆಯಿತ್ತು,ಆದರೆ ಅವರು ಇವತ್ತು ಕಾಂಗ್ರೆಸ್ ಸರಕಾರ ಒಳಮಿಸಲಾತಿ ಜಾರಿಮಾಡದೆ ನಿರಾಸೆ ಮಾಡಿದೆ,ಅದಿವೇಶನದಲ್ಲಿ ಒಳಮಿಸಲಾತಿ ಜಾರಿ ಮಾಡದಿದ್ದರೆ ಮುಂದೆ ಕಾಂಗ್ರೆಸ್ ಸರಕಾರ ರಚನೆ ಆಗದಂತೆ ಮಾಡ್ತೀವಿ ಎಂದು ಎಚ್ಚರಿಸಿದರು.

ಬಳಿಕ ತಹಸಿಲ್ದಾರ ಕಚೇರಿಯ ಆವರಣದಲ್ಲಿ ಎದುರು ಅನಿರ್ದಿಷ್ಟಾವಧಿ ಧರಣಿ ಆರಂಭಿಸಿ ತಾಲೂಕಾಡಳಿತ ಮೂಲಕ ಮುಖ್ಯಮಂತ್ರಿಗಳಿಗೆ ಒಳಮಿಸಲಾತಿ ಜಾರಿ ಮಾಡುವಂತೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಗೋಕಾಕ ದಲಿತ ಮುಖಂಡರಾದ ಬಸವರಾಜ ಆರೆನ್ನವರ, ಗೋವಿಂದ ಕಳ್ಳಿಮನಿ,ಬಾಳೇಶ ಸಂತವ್ವಗೋಳ, ಈಶ್ವರ ಗುಡಜ, ಬಸು ಮೇಸ್ತ್ರಿ,ರವಿ ಕಡಕೋಳ,ಮಂಜುಳಾ ರಾಮಗಾನಟ್ಟಿ ಸೇರಿದಂತೆ ಗೋಕಾಕ ತಾಲೂಕಿನ ನೂರಾರು ಮಾದಿಗ ಸಮಾಜದ ಯುವಕರು,ಹಿರಿಯರು, ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಮನೋಹರ ಮೇಗೇರಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ