LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

೧೦ರಂದು ಸಿದ್ಧಾರೂಢ ಮಠದಲ್ಲಿ ಜಲರಥೋತ್ಸವ

Advertisement
ಹುಬ್ಬಳ್ಳಿ : ಶಿವಾವತಾರಿಯ ವಾಸಸ್ಥಾನವೆಂದೇ ಕರೆಸಿಕೊಳ್ಳುವ ಶ್ರೀ ಸಿದ್ಧಾರೂಢ ಮಠದ ಜಲರಥೊತ್ಸವ (ತೆಪ್ಪದ ತೇರು) ಆ. ೧೦ರಂದು ಸಂಜೆ ೫.೩೦ಕ್ಕೆ ಜರುಗಲಿದೆ ಎಂದು ಟ್ರಸ್ಟ್ ಕಮಿಟಿ ಚೇರಮನ್ ಚನ್ನವೀರ ಮುಂಗುರವಾಡಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸದ್ಗುರು ಶ್ರೀ ಸಿದ್ಧಾರೂಢರ ೯೬ನೇ ಪುಣ್ಯಾರಾಧನೆ ಕಾರ್ಯಕ್ರಮವು ಆ. ೪ರಿಂದ ಆರಂಭಗೊಂಡು ಆ. ೧೦ರಂದು ಜಲ ರಥೋತ್ಸವದೊಂದಿಗೆ ಸಂಪನ್ನಗೊಳ್ಳಲಿದೆ ಎಂದರು.

ನಿತ್ಯ ಶ್ರೀಮಠದ ಕೈಲಾಸ ಮಂಟಪದಲ್ಲಿ ಬೆಳಗ್ಗೆ ೭.೪೫ಕ್ಕೆ ಪುರಾಣ ಪಠಣ, ೯.೩೦ಕ್ಕೆ ಪ್ರವಚನ, ಸಂಜೆ ೫ ಗಂಟೆಗೆ ಕೀರ್ತನೆ ಹಾಗೂ ರಾತ್ರಿ ಮಹಾಪೂಜೆ ಜರುಗಲಿದೆ ಎಂದು ತಿಳಿಸಿದರು.

ಸಿದ್ಧಾರೂಢರ ಸ್ವಾಮೀಜಿ ಜಲರಥೋತ್ಸವವು ಉತ್ತರ ಕರ್ನಾಟಕದಲ್ಲಿಯೇ ಪ್ರಸಿದ್ಧವಾಗಿದೆ. ಕರ್ನಾಟಕ, ಮಹಾರಾಷ್ಟ್ರ, ಆಂಧ್ರ ಪ್ರದೇಶ, ಗೋವಾ ರಾಜ್ಯ ಗಳಿಂದ ಭಕ್ತರು ಆಗಮಿಸುತ್ತಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಗೌರವ ಕಾರ್ಯದರ್ಶಿ ರಮೇಶ ಬೆಳಗಾವಿ, ಧರ್ಮದರ್ಶಿಗಳಾದ ಬಸವರಾಜ ಕಲ್ಯಾಣಶೆಟ್ಟರ, ಬಾಳು ಮಗಜಿಕೊಂಡಿ, ವಿನಾಯಕ ಘೋಡ್ಕೆ, ಸರ್ವಮಂಗಳಾ ಪಾಠಕ,ಮಂಜುನಾಥ ಮುನವಳ್ಳಿ ಮ್ಯಾನೇಜರ್ ಈರಣ್ಣ ತುಪ್ಪದ ಇತರರು ಪಾಲ್ಗೊಂಡಿದ್ದರು.

ವರದಿ : ಸುಧೀರ್ ಕುಲಕರ್ಣಿ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ