Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆ ಆರ್. ಇ.ಎಸ್ ಶಿಕ್ಷಣ ಸಂಸ್ಥೆಯ 101ನೇ ಸಂಸ್ಥಾಪನಾ  ದಿನಾಚರಣೆ

Advertisement
ಕಾಗವಾಡ: ಗುರು-ಶಿಷ್ಯ ಸಂಬಂಧ  ಎಲ್ಲಿ ಒಂದೇ  ಇರುತ್ತದೆ  ಅಲ್ಲಿ ನಿಂತರ  ಜ್ಞಾನದ ಗಂಗೆ ಹರಿಯುತ್ತದೆ ಎಂದು ಐನಾಪುರ ಗುರುದೇವಾಶ್ರಮದ ಬಸವೇಶ್ವರ ಸ್ವಾಮೀಜಿ  ನುಡಿದರು.
ಅವರು ತಾಲೂಕಿನ ಐನಾಪುರ ಪಟ್ಟಣದಲ್ಲಿ ಸಂಸ್ಥೆಯ ಸಭಾಭವನದಲ್ಲಿ ಆಯೋಜಿಸಿದ ಕೆ ಆರ್. ಇ.ಎಸ್ ಶಿಕ್ಷಣ ಸಂಸ್ಥೆಯ 101ನೇ ಸಂಸ್ಥಾಪನಾ  ದಿನಾಚರಣೆ ಆಚರಿಸಿ.2024-25ಸಾಲಿನ ಎಸ್ ಎಸ್ ಎಲ್ ಸಿ   ಹಾಗೂ ದ್ವೀತಿಯ ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸತ್ಕಾರ ಸಮಾರಂಭವನ್ನು ಶ್ರೀ ಶಾರದಾದೇವಿ ಭಾವಚಿತ್ರಕ್ಕೆ ಪೂಜೆ ಸಲಿಸುವ ಮೂಲಕ ಉದ್ಘಾಟಿಸಿ. ಆರ್ಶಿವಚನ ನೀಡಿದ ಅವರು ಶಾಲೆಯಲ್ಲಿ ಜ್ಞಾನದ ಜೊತೆಗೆ ಆಟ, ಪಾಠ, ನೋಟ,ದೊಂದಿಗೆ  ಬದುಕು ಕಟ್ಟಿಕೊಳ್ಳುವ ಜ್ಞಾನವನ್ನು ಗುರು ಗಳು ನೀಡುತ್ತಾರೆ  ಎಂದರು.
ಸಮಾಜದಲ್ಲಿ ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠವಾದ ವೃತ್ತಿಯಾಗಿದೆ ಎಲ್ಲಾ ವೃತ್ತಿಗೂ ಮೂಲ ಆಗಿರುವುದರೊಂದಿಗೆ ಉತ್ತಮ ಮಾನವ ಸಂಪನ್ಮೂಲವನ್ನು ಸೃಷ್ಟಿಸುವ ಶಕ್ತಿ ಇರುವುದು ಈ ವೃತ್ತಿಗೆ ಮಾತ್ರ. ಒಂದು ಶಿಕ್ಷಣ ಸಂಸ್ಥೆಯ ಬೆಳವಣಿಗೆಯಲ್ಲಿ ಬೋಧಕ ಬೋಧಕೇತರ ಸಿಬ್ಬಂದಿಗಳ ಪಾತ್ರವೂ ಮಹತ್ತರವಾದುದು ಎಂದ ಅವರು ಜ್ಞಾನಕ್ಕಿಂತ ಉದ್ಯೋಗಕ್ಕಾಗಿಯೇ ಶಿಕ್ಷಣ ಬೇಕು  ಎನ್ನುವ ಸನ್ನಿವೇಶದಲ್ಲಿ ಕೆ ಆರ್ ಇ ಎಸ್ ಶಿಕ್ಷಣ ಸಂಸ್ಥೆ ಸಂಸ್ಥಾಪಕರಾದ  ಜಿ ಎಂ ದೇಶಪಾಂಡೆ ಗುರುಗಳ ಉನ್ನತ ಹುದ್ದೆಗಳನ್ನು ತ್ಯಜಿಸಿ ಸ್ವತಃ ಶಿಕ್ಷಕರಾಗಿ ಹಳ್ಳಿಗಳಿಂದ ಮಕ್ಕಳನ್ನು ಕರೆತಂದು ಶಿಕ್ಷಣ ನೀಡಲಾರಂಭಿಸಿ ಕೆ ಆರ್ ಇಎಸ್ ಸಂಸ್ಥೆ ಸ್ಥಾಪಿಸಿ ಬಡಮಕ್ಕಳಿಗೆ  ಶಿಕ್ಷಣ ನೀಡದ ಮಹಾನ ಚೇತನರು ಎಂದರು. ಇಸಂದರ್ಭದಲ್ಲಿ ಸನ್2024-25ಸಾಲಿನ ಎಸ್ ಎಸ್ ಎಲ್ ಸಿ   ಹಾಗೂ ದ್ವೀತಿಯ ಪಿಯುಸಿ  ಪರೀಕ್ಷೆ ಯಲ್ಲಿ ಪಾಸಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಪ್ರತಿಭಾ ಪುರಸ್ಕಾರ ನೀಡಿದರು.
ಸಂಸ್ಥೆಯ ಕಾರ್ಯದರ್ಶಿ ರಾಜೇಂದ್ರ ಪೋತದಾರ ಅಧ್ಯಕ್ಷತೆ , ವಹಿಸಿದರು.
ಸಂಸ್ಥೆಯ ನಿರ್ದೇಶಕ ಸಂಜು ಭಿರಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಂದರ್ಭದಲ್ಲಿ ಸಂಸ್ಥೆ ನಿರ್ದೇಶಕರಾದ ,ಉದಯ ನಿಡಗುಂದಿ,  ದಿವಾಕರ ಮುದಕವಿ ಪ್ರಾಚಾರ್ಯರಾದ ಡಾ.ಬಿ.ಪ್ರೇಮಾನಂದ,ಎಸ್.ಎಂ ಸೋಂದಕರ,ಎಸ್ ಎಸ್ ಚೌಗಲಾ ಶಿವಶಂಕರ ಕುಂಬಾರ,   ಪುಷ್ಪಾ ದೇಶಪಾಂಡೆ, ಗುರು ದೇಶಪಾಂಡೆ ,ಹಾಗೂ,ಸಂಸ್ಥೆ ಯ ಎಲ್ಲ ಸದಸ್ಯರು ಶಿಕ್ಷಕರು ವಿದ್ಯಾರ್ಥಿಗಳು ಪಾಲಕರು ಇತರರು ಇದರು.
ಉಪ್ರಾಚಾರ್ಯರಾದ  ಎ.ಎಂ.ಹುಲ್ಲೆನ್ನವರ ಸ್ವಾಗತಿಸಿದರು. ಶಿಕ್ಷಕರಾದ ಎ ಎಸ್ ನಾಯಿಕ  ನಿರೂಪಿಸಿದರು. ಶಿಕ್ಷಕಯರಾದ  ಎಸ್ ಎಂ ತಳಕೇರಿ ವಂದಿಸಿದರು.

ವರದಿ: ಚಂದ್ರಕಾಂತ ಕಾಂಬಳೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್