Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಲಬುರಗಿ: ಪ್ರೀತಿ ವಿಚಾರಕ್ಕೆ 10ನೇ ತರಗತಿಯ ಹುಡುಗ-ಹುಡುಗಿ ಆತ್ಮಹತ್ಯೆ

Advertisement
ಕಲಬುರಗಿ: ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಓದುತ್ತಿದ್ದ 10ನೇ ತರಗತಿಯ ಹದಿಹರೆಯದ ಬಾಲಕ ಮತ್ತು ಬಾಲಕಿ ಶನಿವಾರ ಬೆಳಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಿಂದುಳಿದ ವರ್ಗಕ್ಕೆ ಸೇರಿದ ಬಾಲಕ ಮತ್ತು ಅಲ್ಪಸಂಖ್ಯಾತ ಸಮುದಾಯದ ಬಾಲಕಿಯ ಮೃತದೇಹಗಳು ಮಲ್ಲಿ-ಐನಾಪುರ ರಸ್ತೆಯ ಹೊಲದಲ್ಲಿ ಒಂದೇ ಹಗ್ಗದಿಂದ ಮರಕ್ಕೆ ನೇತಾಡುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿವೆ.

ಬಾಲಕ ನಾಗರಹಳ್ಳಿ ಗ್ರಾಮದವನಾಗಿದ್ದರೆ, ಹುಡುಗಿ ಮಲ್ಲಿ ಗ್ರಾಮದವಳಾಗಿದ್ದು, ಇಬ್ಬರೂ 16 ವರ್ಷದವರಾಗಿದ್ದಾರೆ.

ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎಂದು ಹೇಳಲಾಗಿದ್ದು, ಅವರ ಕುಟುಂಬಗಳಿಗೆ ತಮ್ಮ ಪ್ರೀತಿ ವಿಚಾರ ತಿಳಿಸಿರಲಿಲ್ಲ. ಶುಕ್ರವಾರ ರಾತ್ರಿ ಹುಡುಗಿ ಮನೆಯಲ್ಲಿ ಮಲಗಿದ್ದಳು. ಆದರೆ ಶನಿವಾರ ಬೆಳಗ್ಗೆ ನೋಡಿದರೆ ಮನೆಯಲ್ಲಿ ಇರಲಿಲ್ಲ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಬಯಲು ಶೌಚಕ್ಕೆ ಹೋಗಿದ್ದಾಳೆಂದು ಬಾಲಕಿ ಕುಟುಂಬ ಸದಸ್ಯರು ಭಾವಿಸಿದ್ದರು. ಆದರೆ ನಂತರ, ಹುಡುಗಿ ಮತ್ತು ಹುಡುಗ ಹೊಲದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಯಾರೋ ಅವರಿಗೆ ಮಾಹಿತಿ ನೀಡಿದರು. ಇಬ್ಬರ ಕುಟುಂಬ ಸದಸ್ಯರು ಸ್ಥಳಕ್ಕೆ ಬಂದು ಶವಗಳನ್ನು ತೆಗೆದುಕೊಂಡು ಅಂತಿಮ ವಿಧಿವಿಧಾನ ನೆರವೇರಿಸಿದರು.

ಅಂತ್ಯಕ್ರಿಯೆಯ ನಂತರವೇ ಪೊಲೀಸರಿಗೆ ಘಟನೆಯ ಬಗ್ಗೆ ಮಾಹಿತಿ ಬಂದಿದ್ದು, ಎರಡೂ ಕುಟುಂಬಗಳು ಘಟನೆಯ ಬಗ್ಗೆ ಯಾರನ್ನೂ ಅನುಮಾನಿಸುವುದಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ