Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್​ಎಸ್​ಎಲ್​ಸಿ ಪರೀಕ್ಷೆ-2 ಮೇ 26ರಿಂದ ಜೂನ್ 2ರವರೆಗೆ

Advertisement
ಬೆಂಗಳೂರು2024-25ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷಾ-1ರ ಫಲಿತಾಂಶ ಇಂದು ಪ್ರಕಟವಾಗಿದೆ. ತೇರ್ಗಡೆಯಾಗದವರು ಹಾಗೂ ಉತ್ತಮ ಫಲಿತಾಂಶ ಬಯಸಿ ಮರುಪರೀಕ್ಷೆ ಬಯಸುವ ವಿದ್ಯಾರ್ಥಿಗಳಿಗೆ ಪರೀಕ್ಷೆ-2 ಹಾಗೂ ಪರೀಕ್ಷೆ-3 ದಿನಾಂಕ ನಿಗದಿಪಡಿಸಿ, ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದೆ.

ಎಸ್​ಎಸ್​ಎಲ್​ಸಿ ಪರೀಕ್ಷೆ-2 ಮೇ 26ರಿಂದ ಜೂನ್ 2ರವರೆಗೆ ಹಾಗೂ ಪರೀಕ್ಷೆ-3 ಜೂ. 23ರಿಂದ 30ರವರೆಗೆ ನಡೆಯಲಿದೆ.

ಮೊದಲ ಪರೀಕ್ಷೆ ಬರೆದು ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ಈ ಬಾರಿ ಪರೀಕ್ಷಾ ಶುಲ್ಕವಿಲ್ಲ.

ಉತ್ತಮ ಫಲಿತಾಂಶ ಬಯಸುವ ವಿದ್ಯಾರ್ಥಿಗಳು, ಪುನಾರವರ್ತಿತ ಹಾಗೂ ಖಾಸಗಿ ಅಭ್ಯರ್ಥಿಗಳು ನಿಗದಿತ ಪರೀಕ್ಷಾ ಶುಲ್ಕ ಪಾವತಿಸಬೇಕಿದೆ.

ಸ್ಕ್ಯಾನ್ ಪ್ರತಿ, ಮರುಎಣಿಕೆ ಮತ್ತು ಮೌಲ್ಯಮಾಪನಕ್ಕಾಗಿ ಇಲಾಖೆಯ ಜಾಲತಾಣ kseab.karnataka.gov.in ಮೂಲಕ ಅರ್ಜಿ ಸಲ್ಲಿಸಬೇಕು.

ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆಯಲು ಮೇ 2ರಿಂದ 7ರವರೆಗೆ ಆನ್​​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಆನ್​ಲೈನ್ ಬ್ಯಾಂಕಿಂಗ್ ಸೌಲಭ್ಯವಿಲ್ಲದವರು ಆನ್​ಲೈನ್​​ನಲ್ಲಿ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆಯಲು ಅರ್ಜಿ ಸಲ್ಲಿಸಿದ ನಂತರ ಆಫ್ ಲೈನ್ ಚಲನ್ ಡೌನ್ ಲೋಡ್ ಮಾಡಿಕೊಂಡು ಶುಲ್ಕವನ್ನು ಮೇ 2ರಿಂದ 8ವರೆಗೆ ಬ್ಯಾಂಕ್ ನಲ್ಲಿ ಪಾವತಿಸಬೇಕು.

ಉತ್ತರಪತ್ರಿಕೆಗಳ ಮರುಎಣಿಕೆಗೆ ಮತ್ತು ಮರುಮೌಲ್ಯಮಾಪನಕ್ಕೆ ಮೇ 4ರಿಂದ 11ರವರೆಗೆ ಆನ್​ಲೈನ್ ಮೂಲಕ ಹಾಗೂ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವವರು ಮೇ 4ರಿಂದ 12 ರವರೆಗೆ ನಿಗದಿತ ಶುಲ್ಕ ಪಾವತಿಸಬೇಕೆಂದು ಮಂಡಳಿ ತಿಳಿಸಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ