LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಟ್ಯಾಂಕ್ ನಲ್ಲಿದ್ದ ವಿಷಕಾರಿ ನೀರು ಸೇವಿಸಿ 12 ಮಕ್ಕಳು ಅಸ್ವಸ್ಥ

Advertisement
ಬೆಳಗಾವಿ: ಶಾಲೆಯಲ್ಲಿರುವ ಟ್ಯಾಂಕಿನ ನೀರು ಸೇವಿಸಿ 12 ಮಕ್ಕಳು ಅಸ್ವಸ್ಥಗೊಂಡ ಘಟನೆ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ.

ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಅಸ್ವಸ್ಥ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇನ್ನು ನೀರಿನ ಟ್ಯಾಂಕ್ ಗೆ ಅಪರಿಚಿತ ವ್ಯಕ್ತಿಗಳು  ಕೀಟನಾಶಕ ಬೆರೆಸಿರುವುದು ದೃಢವಾಗಿದೆ. ಇಂದು ಬೆಳಗ್ಗಿನ ಜಾವ 6 ಗಂಟೆಯ ಸುಮಾರಿಗೆ ಟ್ಯಾಂಕ್‌ನಲ್ಲಿ ನೀರು ಸಂಗ್ರಹಿಸಲಾಗಿದೆ.

ಇದೇ ಟ್ಯಾಂಕಿನ ಮೂಲಕ ನೀರು ಸಂಗ್ರಹ ಮಾಡಲಾಗಿದೆ. ಆ ಬಳಿಕವೇ ಕಿಡಿಗೇಡಿಗಳು ಕೀಟನಾಶಕ ಬೆರೆಸಿರಬಹುದು ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.

ನೀರು ಕುಡಿದ ತಕ್ಷಣ ವಿದ್ಯಾರ್ಥಿಗಳಲ್ಲಿ ಹೊಟ್ಟೆ ನೋವು, ವಾಂತಿ ಕಾಣಿಸಿಕೊಂಡಿದೆ. ಶಾಲೆಯಲ್ಲಿ 41 ಮಕ್ಕಳಿದ್ದಾರೆ. ಅಲ್ಲದೇ ಈ ಶಾಲೆಯ ಪಕ್ಕದಲ್ಲೇ 20 ಅಧಿಕ ಮನೆಗಳಿದ್ದು, ಅವರು ಈ ಟ್ಯಾಂಕಿನ ನೀರನ್ನೇ ಅವಲಂಭಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಸಚಿವರಿಗೆ ಮನವಿದೇವದತ್ತ ಪಡಿಕಲ್ ಸುಂದರ ಶತಕಕರಡಿ ದಾಳಿಗೆ ರೈತ ಬಲಿ ಯುಪಿಐ ಸೇವೆ ಸಂಪೂರ್ಣ ಉಚಿತ : ಯಾವುದೇ ರೀತಿಯ ವಹಿವಾಟು ಶುಲ್ಕ ಇರುವುದಿಲ್ಲಟಾಕ್ಸಿಕ್ ಟ್ರೈಲರ್ ಔಟ್ : ದ್ವಿ ಪಾತ್ರದಲ್ಲಿ ಮಿಂಚಿದ ಯಶ್, ಇಲ್ಲದೆ ಲಿಂಕ್ ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಪೋಕ್ಸೋ, ಬಾಲ್ಯವಿವಾಹ ನಿಷೇದ ಕಾಯಿದೆಗಳ ಜಾಗೃತಿ ಕಾರ್ಯಕ್ರಮಸಿಟ್ಟು ತ್ಯಾಗ ಮಾಡಿದ್ರೆ ಮುಂದೆ ಸಿಎಂ ಆಗ್ತೀಯಾ : ಸಚಿವ ವಿಜಯಾನಂದ ಕಾಶಪ್ಪನವರ್‌ಗೆ ಸಿದ್ದನಕೊಳ್ಳ ಶ್ರೀಗಳ ಸ್ಫೋಟಕ ಭವಿಷ್ಯಶೀಘ್ರದಲ್ಲೇ ಸಮಾನ ಮನಸ್ಕರ ಪಕ್ಷ ಸ್ಥಾಪನೆ : ಚೇತನ್ ಅಹಿಂಸಾ ಸಿಟ್ಟನ್ನು ಬಿಟ್ಟರೆ ಮುಂದೆ ಸಿಎಂ ಆಗ್ತಿಯಾ : ಕಾಶಪ್ಪನವರ್ ಗೆ ಸಿದ್ದನಕೊಳ್ಳ ಶ್ರೀಗಳ ಸಲಹೆ 8 ಅಡಿ 10 ಇಂಚು ಉದ್ದದ ಕೂದಲು ಬೆಳೆಸುವ ಮೂಲಕ ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ಬರೆದ ಮಹಿಳೆ