LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

 ಕರ್ನಾಟಕ ಮಕ್ಕಳ ರಕ್ಷಣಾ ಸಮಿತಿ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ನೋಟಬುಕ್ ವಿತರಣೆ

Advertisement
ಕಲಘಟಗಿ : ಕಲಘಟಗಿ ಪಟ್ಟಣದ ಸರಕಾರಿ ಪ್ರಾಥಮಿಕ ಗಂಡುಮಕ್ಕಳ ಶಾಲೆಯ ವಿದ್ಯಾರ್ಥಿಗಳಿಗೆ ಇಂದು ಕರ್ನಾಟಕ ಮಕ್ಕಳ ಹಿತರಕ್ಷಣಾ ಸಮಿತಿ ವತಿಯಿಂದ ಸ್ಕೂಲ್ ಬ್ಯಾಗ್ ಹಾಗೂ ನೋಟಬುಕ್ ವಿತರಣೆ ಮಾಡಲಾಯಿತು.

ಕರ್ನಾಟಕ ಮಕ್ಕಳ ಹಿತರಕ್ಷಣಾ ಸಮಿತಿಯ ರಾಜ್ಯಧ್ಯಕ್ಷರಾದ ಉದಯ ಗೌಡರ ಈ ಒಂದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಒಂದು ಸಮಿತಿಯು ಸುಮಾರು ಒಂದು ವರ್ಷದಿಂದ ಮಕ್ಕಳ ರಕ್ಷಣೆ ಹಾಗೂ ಸಹಾಯ ಮಾಡುತ್ತ ಬಂದಿದ್ದು ಸುಮಾರು ನಾಲ್ಕು ಸಾವಿರ ಪ್ರೌಢಶಾಲೆಯ ಹೆಣ್ಣುಮಕ್ಕಳಿಗೆ ಸ್ವಯಂ ರಕ್ಷಣೆಗಾಗಿ ಕರಾಟೆ ತರಬೇತಿ ನೀಡಲಾಗಿದೆ.

ಅದೆ ರೀತಿ ಇಂದು ಬಡ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ನೋಟಬುಕ್ ಮತ್ತು ಪೆನ್ನುಗಳನ್ನು ನೀಡಲಾಯಿತು. ಮುಂದಿನ ದಿನಗಳಲ್ಲಿ ಸಮಿತಿ ವತಿಯಿಂದ ಸುಮಾರು ಐದುನೂರು ಬಡ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ನೋಟಬುಕ್ ನೀಡುವ ಉದ್ದೇಶ ಹೊಂದಿದ್ದು ಇಗಾಗಲೇ ಈ ಸಮಿತಿಯು ರಾಜ್ಯದ ಏಳು ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸಲು ಸಜ್ಜಾಗಿದ್ದು ಮಕ್ಕಳ ರಕ್ಷಣೆ ಹಾಗೂ ಸಹಾಯಕ್ಕೆ ನಾವು ಸಿದ್ದರಿದ್ದೇವೆ ಮಕ್ಕಳು ತಮಗೆ ಏನಾದರೂ ತೊಂದರೆ ಹಾಗೂ ಸಮಸ್ಯೆ ಇದ್ದರೆ ನಮ್ಮ ಸಮಿತಿಯನ್ನು ಸಂಪರ್ಕಿಸಬಹುದು ಎಂದು ರಾಜ್ಯಧ್ಯಕ್ಷರಾದ ಉದಯ ಗೌಡರ ತಿಳಿಸಿದರು.

ಈ ಸಂಧರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಸಹದೇವ ಹರಮಣ್ಣವರ, ರಾಜ್ಯ ಕಾರ್ಯದರ್ಶಿ ವಿಜಯಲಕ್ಷ್ಮಿ ಹರಮಣ್ಣವರ, ಕಲಘಟಗಿ ತಾಲೂಕ ಅಧ್ಯಕ್ಷರಾದ ಕಿರಣ ಗೌಡರ, ಶಾಲಾ ಮುಖ್ಯ ಶಿಕ್ಷಕರಾದ ವೈ ಜಿ ಭಗವತಿ, ಶಿಕ್ಷಕರಾದ ಎಸ್ ಐ ಚಿಕನರ್ತಿ, ಡಿ ಬಿ ಪದ್ಮಣ್ಣವರ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸುನೀಲ ಕಮ್ಮಾರ ಸಮಿತಿಯ ಸದಸ್ಯರಾದ ಉಮೇಶ ಅಮಾಶಿ, ಮೃತ್ಯುಂಜಯ ಹುಬ್ಬಳ್ಳಿಮಠ, ವಿವೇಕ ಗಾಮನಗಟ್ಟಿ, ವಿಕಾಸ ಅವರಂಗಿ, ಅಭಿಷೇಕ ಗೌಡರ,ನಿಂಗನಗೌಡ ಹುಲಕೊಪ್ಪ, ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ