LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಜುಲೈ 1 ರಿಂದ 8 ರವರೆಗೆ ಪಂಢರಪುರಕ್ಕೆ 14 ವಿಶೇಷ ರೈಲು ವ್ಯವಸ್ಥೆ

Advertisement
ಧಾರವಾಡ: ಪಂಢರಪುರ ಕ್ಷೇತ್ರದಲ್ಲಿ ನಡೆಯುವ ಆಷಾಢ ಏಕಾದಶಿ ಜಾತ್ರೆಯಲ್ಲಿ ಪಾಲ್ಗೋಳ್ಳುವ ಯಾತ್ರಾರ್ಥಿಗಳಿಗೆ ಅನುಕೂಲಕರ ಪ್ರಯಾಣವನ್ನು ಕಲ್ಪಿಸಲು ಭಾರತೀಯ ರೈಲ್ವೆಯು ಕರ್ನಾಟಕದ ಹುಬ್ಬಳ್ಳಿ ಮತ್ತು ಮಹಾರಾಷ್ಟ್ರದ ಪಂಢರಪುರ ನಡುವೆ 14 ಹೆಚ್ಚುವರಿ ಕಾಯ್ದಿರಿಸದ ವಿಶೇಷ ರೈಲುಗಳನ್ನು ಜುಲೈ 1 ರಿಂದ 8 ರವರೆಗೆ (ಜುಲೈ 4 ರಂದು ಹೊರತುಪಡಿಸಿ) ಹೊರಡಿಸಲಿದೆ ಎಂದು ಕೇಂದ್ರ ರೈಲ್ವೆಯ ಸೊಲ್ಲಾಪೂರ ವಿಭಾಗದ ಸಾರ್ವಜನಿಕ ಸಂಪರ್ಕ ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಮಹಾರಾಷ್ಟ್ರದ ಶ್ರೀಕ್ಷೇತ್ರ ಪಂಢರಪುರದ ಆಷಾಢ ಏಕಾದಶಿ ಜಾತ್ರೆಗೆ ಆಗಮಿಸುವ ಉತ್ತರ ಕರ್ನಾಟಕದ ಭಕ್ತರಿಗೆ ಅನುಕೂಲವಾಗಲು ಮತ್ತು ಸುಗಮ ಪ್ರಯಾಣಕ್ಕೆ ಸಹಾಯಕವಾಗಲು ಕಾಯ್ದಿರಿಸದ 14 ವಿಶೇಷ ರೈಲುಗಳನ್ನು ಸಂಚರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಹುಬ್ಬಳ್ಳಿ-ಪಂಢರಪುರ ಅನ್‍ಸವ್ರ್ಡ್ ಸ್ಪೆಷಲ್(14 ಟ್ರಿಪ್‍ಗಳು): ರೈಲು ಸಂಖ್ಯೆ 07313 ಬುಕ್ ಮಾಡದ ವಿಶೇಷ ರೈಲು ಜುಲೈ 1 ರಿಂದ ಜುಲೈ 8, 2025 ರವರೆಗೆ(ಜುಲೈ 4 ಹೊರತುಪಡಿಸಿ) ಬೆಳಿಗ್ಗೆ 5:10 ಕ್ಕೆ ಹುಬ್ಬಳ್ಳಿಯಿಂದ ಹೊರಟು ಅದೇ ದಿನ ಸಂಜೆ 4 ಕ್ಕೆ ಪಂಢರಪುರ ತಲುಪಲಿದೆ.(7 ಪ್ರವಾಸಗಳು)
ರೈಲು ಸಂಖ್ಯೆ: 07314 ಕಾಯ್ದಿರಿಸದ ವಿಶೇಷ ರೈಲು ಜುಲೈ 1 ರಿಂದ ಜುಲೈ 8, 2025 ರವರೆಗೆ (ಜುಲೈ 4 ಹೊರತುಪಡಿಸಿ) ಸಂಜೆ 6 ಗಂಟೆಗೆ ಪಂಢರಪುರದಿಂದ ಹೊರಟು ಮರುದಿನ ಬೆಳಿಗ್ಗೆ 4 ಗಂಟೆಗೆ ಹುಬ್ಬಳ್ಳಿಯನ್ನು ತಲುಪುತ್ತದೆ.(7 ಪ್ರವಾಸಗಳು)

ನಿಲುಗಡೆಗಳು: ಧಾರವಾಡ, ಅಳ್ನಾವರ, ಲೋಂಡಾ, ಖಾನಾಪುರ, ದೇಸೂರು, ಬೆಳಗಾವಿ, ಪಚ್ಚಾಪುರ, ಗೋಕಾಕ ರಸ್ತೆ, ಘಟಪ್ರಭಾ, ಚಿಕ್ಕೋಡಿ ರಸ್ತೆ, ರಾಯಬಾಗ, ಚಿಂಚಲಿ, ಕುಡಚಿ, ಉಗಾರ ಖುರ್ದ, ಶೇಡಬಾಳ, ವಿಜಯನಗರ, ಮೀರಜ್, ಅರಗ, ಧಲಗಾಂವ, ಜಾತ್ ರಸ್ತೆ, ವಾಸುದ್ ಮತ್ತು ಸಂಗೋಳ.

ಸಂಯೋಜನೆ: 8 ಸಾಮಾನ್ಯ ದ್ವಿತೀಯ ದರ್ಜೆ, ಸ್ಲೀಪರ್ ವರ್ಗ ಮತ್ತು 2 ಲಗೇಜ್ ಕಮ್ ಗಾರ್ಡ್‍ನ ಬ್ರೇಕ್ ವ್ಯಾನ್‍ಗಳು.(10 ಬೋಗಿಗಳು)
ಟಿಕೆಟಿಂಗ್: ಕಾಯ್ದಿರಿಸದ ಬೋಗಿಗಳ ಟಿಕೆಟ್‍ಗಳನ್ನು ನಿಲ್ದಾಣಗಳಲ್ಲಿನ ಬುಕಿಂಗ್ ಕೌಂಟರ್‍ಗಳ ಮೂಲಕ ಮತ್ತು ಯುಟಿಎಸ್ ಅಪ್ಲಿಕೇಶನ್ ಮೂಲಕವೂ ಬುಕ್ ಮಾಡಬಹುದು.

ಈ ವಿಶೇಷ ರೈಲುಗಳ ವಿವರವಾದ ಸಮಯ ಮತ್ತು ನಿಲುಗಡೆಗಳಿಗಾಗಿ, ದಯವಿಟ್ಟು www.enquiry.indianrail.gov.in ಗೆ ಭೇಟಿ ನೀಡಿ ಅಥವಾ NTES ಅಪ್ಲಿಕೇಶನ್ ಡೌನ್‍ಲೋಡ್ ಮಾಡಬಹುದು ಎಂದು ಭಾರತೀಯ ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ