ಧಾರವಾಡ : ಒಂದೇ ಶಾಲೆಯಲ್ಲಿ ಕಲಿತ ಒಟ್ಟು 17 ಜನ ಯುವಕರು ಇದೀಗ ಅಗ್ನಿವೀರರಾಗಿ ಆಯ್ಕೆಯಾಗಿದ್ದಾರೆ. ಇಷ್ಟಕ್ಕೂ ಈ ಯುವಕರು ಯಾವ ಗ್ರಾಮದವರು? ಯಾವ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.
ತಮ್ಮ ಶಿಕ್ಷಕರಿಂದ ಅಭಿನಂದನೆ ಪಡೆದುಕೊಳ್ಳುತ್ತಿರುವ ಈ ಯುವಕರು ಉಪ್ಪಿನ ಬೆಟಗೇರಿ ಕಲ್ಲೂರು ಹಾಗೂ ಹನುಮನಹಾಳ ಗ್ರಾಮದವರು ಈ ಎಲ್ಲ ಯುವಕರು ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪೂರ್ಣಗೊಳಿಸಿದ್ದು, ಉಪ್ಪಿನ ಬೆಟಗೇರಿ ಗ್ರಾಮದ ಎಸ್ಜಿವಿ ಹೈಸ್ಕೂಲ್ ಮತ್ತು ಕಾಲೇಜಿನಲ್ಲಿ ಇದೇ ಶಾಲೆಯಲ್ಲಿ ಕಲಿತ ಈ ಯುವಕರಿಗೆ ಭಾರತೀಯ ಸೇನೆ ಸೇರಬೇಕು ಎಂಬ ಆಸೆ ಇತ್ತು. ಆ ಆಸೆ ಹೊತ್ತುಕೊಂಡೇ ತಮ್ಮ ಗುರಿ ಸಾಧಿಸಲು ಪ್ರಯತ್ನ ಆರಂಭಿಸಿದ್ದರು.
ನಿರಂತರ ಪರಿಶ್ರಮದ ಫಲವಾಗಿ ಇದೀಗ 17 ಜನ ಯುವಕರು ಭಾರತೀಯ ಸೇನೆಗೆ ಅಗ್ನಿವೀರರಾಗಿ ಆಯ್ಕೆಯಾಗಿದ್ದಾರೆ. ಇದರಲ್ಲಿ ಓರ್ವ ಯುವಕ ವಾಯುಸೇನೆಯ ಅಗ್ನಿವೀರನಾಗಿ ಆಯ್ಕೆಯಾಗಿದ್ದಾನೆ.
ಉಪ್ಪಿನಬೆಟಗೇರಿಯ ಶಂಕರ ಕುರಗುಂದ, ಶಿವಾನಂದ ಮಸೂತಿ, ನಿರಂಜನ ಹುಟಗಿ, ಕಲೀಂ ಮುಜಾವರ, ಈರಣ್ಣ ಮಸೂತಿ, ಗಂಗಾಧರ ಅಂಬಣ್ಣವರ, ಶಬ್ಬೀರ್ ನದಾಫ್ ಸೇರಿದಂತೆ ಒಟ್ಟು 7 ಯುವಕರು ಹಾಗೂ ಕಲ್ಲೂರಿನ ಅಭಿಷೇಕ ಚಿಕ್ಕಮಠ, ಪ್ರದೀಪ ಮರೇದ, ಕುಮಾರ ಬುಡರಕಟ್ಟಿ, ಈರಣ್ಣ ಮರೇದ, ಪ್ರದೀಪ ಶಿವಳ್ಳಿ, ಅಮೀತಪೀರ್ ಸೈಯದನವರ ಸೇರಿದಂತೆ ಒಟ್ಟು 6 ಯುವಕರು ಮತ್ತು ಹನುಮನಾಳ ಗ್ರಾಮದ ಗೋಪಾಲ ಅಂಗಡಿ, ಸೋಮಲಿಂಗ ಅಂಗಡಿ, ಗೋಪಾಲ ಗಬ್ಬೂರ ಮೆಳೆಪ್ಪ ಅಂಗಡಿ ಸೇರಿದಂತೆ ಒಟ್ಟು 4 ಯುವಕರು ಹೀಗೆ ಉಪ್ಪಿನಬೆಟಗೇರಿಯ ಶ್ರೀ ಗುರು ವಿರೂಪಾಕ್ಷೇಶ್ವರ ಪ್ರೌಢಶಾಲೆಯಲ್ಲಿ ಕಲಿತ ಒಟ್ಟು 17 ಯುವಕರು ʻಅಗ್ನಿವೀರ'ರಾಗಿ ಆಯ್ಕೆಯಾಗಿದ್ದಾರೆ.

