LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

2ನೇ ಮದುವೆಯಾಗುತ್ತಿದ್ದ ಪತಿಗೆ ಮಂಟಪದಲ್ಲೇ ಥಳಿಸಿದ 1ನೇ ಹೆಂಡತಿ 

Advertisement
ಚಿತ್ರದುರ್ಗ: ಎರಡನೇ ಮದುವೆಯಾಗುತ್ತಿದ್ದ ಪತಿಗೆ ಮಂಟಪದಲ್ಲೇ ಮೊದಲ ಪತ್ನಿ ಚಪ್ಪಲಿಯಿಂದ ಹಿಗ್ಗಾಮುಗ್ಗಾ ಹೊಡೆದಿರುವ ಘಟನೆ ಚಿತ್ರದುರ್ಗ ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ನಡೆದಿದೆ.

4 ವರ್ಷದ ಹಿಂದೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮುಶೇನಾಳದ‌ ತನುಜಾ ಎಂಬಾಕೆ, ಚಿಕ್ಕಮಗಳೂರು ಜಿಲ್ಲೆಯ ಅರಸೀಕೆರೆಯ ತಿಪ್ಪಘಟ್ಟದ ಕಾರ್ತಿಕ್ ನಾಯ್ಕ್‌ನನ್ನು ಕೈಹಿಡಿದಿದ್ದಳು.

ಹೀಗಿದ್ದೂ ಕಾರ್ತಿಕ್ ಯಾರಿಗೂ ಗೊತ್ತಾಗದಂತೆ ಚಿತ್ರದುರ್ಗದಲ್ಲಿ 2ನೇ ಮದುವೆಗೆ ಪ್ಲಾನ್ ಮಾಡಿದ್ದ. ಮಾಹಿತಿಗಳ ಪ್ರಕಾರ, ವರದಕ್ಷಿಣೆ ಆಸೆಗೆ ಮತ್ತೊಮ್ಮೆ‌ ಹಸೆಮಣೆ ಏರಲು ಸಿದ್ಧವಾಗಿದ್ದ ಎನ್ನಲಾಗಿದೆ.

ಈ ವಿಚಾರ ಹೇಗೋ ಮೊದಲ ಪತ್ನಿಯ ಕಿವಿಗೆ ಬಿದ್ದಿದೆ. ಸುದ್ದಿ ತಿಳಿದು ಕುಟುಂಬಸ್ಥರೊಂದಿಗೆ ಮಂಟಪಕ್ಕೇ ಬಂದು ಪತ್ನಿ ಗಂಡನಿಗೆ ಧರ್ಮದೇಟು ಕೊಟ್ಟಿದ್ದಾಳೆ.

ಇದರಿಂದ ಗಂಡನ ಎರಡನೇ ಮದುವೆಗೆ ಬ್ರೇಕ್ ಬಿದ್ದಿದೆ. ಚಿತ್ರದುರ್ಗ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇತ್ತ ಮದುವೆಗೆ ತಯಾರಾಗಿದ್ದ ವಧುವಿನ ಕುಟುಂಬಸ್ಥರು ಆಘಾತಕ್ಕೆ ಒಳಗಾಗಿದ್ದಾರೆ.

ಕಾರ್ತಿಕ್‌ ಜತೆ ನನಗೆ 4 ವರ್ಷಗಳ ಹಿಂದೆ ಮದುವೆಯಾಗಿತ್ತು. ವರದಕ್ಷಿಣೆಗಾಗಿ ನನಗೆ ತುಂಬಾ ಚಿತ್ರಹಿಂಸೆ ನೀಡಿದ್ದಾರೆ.

ವರದಕ್ಷಿಣೆಯೂ ನೀಡಲಾಗಿದೆ. ಆದರೂ ನನ್ನ ಗಂಡ ಎರಡನೇ ಮದುವೆಗೆ ಮುಂದಾಗಿದ್ದಾನೆ ಎಂದು ಮೊದಲ ಪತ್ನಿ ತನುಜಾ ಹೇಳಿದ್ದಾರೆ.

ಮದುವೆಯಾಗಿ ಈ ರೀತಿ ಮೋಸ ಮಾಡುವವರಿಗೆ 10 ವರ್ಷ ಜೈಲಿಗೆ ಹಾಕಬೇಕು. ವರದಕ್ಷಿಣೆ ಕೂಡ ಪಡೆದಿದ್ದಾನೆ.

ಅಳಿಯ ಎರಡನೇ ಮದುವೆಯಾಗುತ್ತಿದ್ದ ಎಂಬ ವಿಷಯ ತಿಳಿದು ಮದುವೆ ನಿಲ್ಲಿಸಿದ್ದೇವೆ. ನಮಗೆ ನ್ಯಾಯ ಸಿಗಬೇಕು ಎಂದು ತನುಜಾ ತಂದೆ ನಾಗರಾಜ ನಾಯ್ಕ್‌ ಹೇಳಿದ್ದಾ ರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐರ್ಯಲೆಂಡ್‌ಗೆ ೩೦೦ ರನ್‌ಗಳ ಗೆಲುವಿನ ಗುರಿಶ್ರೀಲಂಕಾ ಇಲೆವೆನ್ ಉತ್ತಮ ಮೊತ್ತಕಳಸಕೊಪ್ಪ ಸೇರಿದಂತೆ 8 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮ: ಜೆ ಟಿ ಪಾಟೀಲಹೆಚ್ಚಿನ ಬಡ್ಡಿ ಆಮಿಷವೊಡ್ಡಿ ಕೋಟಿ ಕೋಟಿ ಹಣ ವಂಚನೆ ಕೇಸ್ : ಶಿವಾನಂದ ನೀಲಣ್ಣವರ ಇಡಿ ರೇಡ್ಹಾಡ ಹಾಗಲೇ ಗುಂಡಿಕ್ಕಿ ಕಾಂಗ್ರೆಸ್ ಮುಖಂಡ ಬರ್ಬರ ಹತ್ಯೆ ಆಗಸ್ಟ್ 15ವರೆಗೆ ಖಾತೆ ಹಂಚಿಕೆಗೆ ಕಾಲಾವಕಾಶ ಇದೆ : ಡಿ.ಕೆ.ಶಿವಕುಮಾರ್ಆಗಸ್ಟ್ 13 ರಂದು ಅಧಿವೇಶನ,14 ರಂದು ನೂತನ ಉಪಸಭಾಪತಿಗಳ ಆಯ್ಕೆ : ಡಿ.ಕೆ.ಶಿವಕುಮಾರ್ಹುತಾತ್ಮ ಯೋಧ ಅಂಗಡಿ ಮಂಜುನಾಥ ನಾಯಕ ಸಾದಾಪುರ ಪುಣ್ಯ ಸ್ಮರಣೆ​ಶ್ರೀ ಕ್ಷೇತ್ರ ಪರಕನಹಟ್ಟಿಯಿಂದ ಹುಬ್ಬಳ್ಳಿಗೆ ಪ್ರಥಮ ವರ್ಷದ ಸಿದ್ಧಾರೂಢ ಪಾದಯಾತ್ರೆ: ಭಕ್ತಿಪರವಶತೆಯಿಂದ ಚಾಲನೆಶ್ರೀ ಮಹರ್ಷಿ ವಾಲ್ಮೀಕಿ ವೃತ್ತ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ  : ಶಾಸಕ ಜಿ.ಹಂಪಯ್ಯ ನಾಯಕ ಸಾಹುಕಾರ