ತುರುವೇಕೆರೆ: ತಾಲೂಕಿನ ಕಸಬಾ ಹೋಬಳಿ ಕಲ್ಲಬೋರನಹಳ್ಳಿ ಕಾರ್ಯಕ್ಷೇತ್ರದ ಗೊಟ್ಟಿಕೆರೆ ಗ್ರಾಮದ ಹಾಲು ಉತ್ಪಾದಕ ಮಹಿಳಾ ಸಹಕಾರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಮಂಜೂರಾಗಿರುವ 2 ಲಕ್ಷ ರೂಗಳ ಸಹಾಯಧನದ ಮಂಜೂರಾತಿ ಪತ್ರವನ್ನು ನೀಡಲಾಯಿತು.
ಹಾಲು ಉತ್ಪಾದಕ ಮಹಿಳಾ ಸಹಕಾರ ಸಂಘದ ಅಧ್ಯಕ್ಷ, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳಿಗೆ ಮಂಜೂರಾತಿ ಪತ್ರವನ್ನು ಧರ್ಮಸ್ಥಳ ಯೋಜನೆಯ ಯೋಜನಾಧಿಕಾರಿ ಶಾಲಿನಿ ಅವರು ನೀಡಿದರು.
ಈ ಸಂದರ್ಭದಲ್ಲಿ ಹಾಲು ಉತ್ಪಾದಕ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಗಾಯತ್ರಮ್ಮ, ಉಪಾಧ್ಯಕ್ಷೆ ಪಾರ್ವತಮ್ಮ, ಕಾರ್ಯದರ್ಶಿ ಗೌರಮ್ಮ, ಸದಸ್ಯರಾದ ರಾಧಿಕಾ, ಸವಿತಾ, ರೂಪ, ಸುಮಿತ್ರ, ಗ್ರಾಮಸ್ಥರಾದ ಪಾಂಡುರಂಗೇಗೌಡ, ರಾಮಕೃಷ್ಣಯ್ಯ, ಹೊನ್ನೇಗೌಡರು, ವಲಯ ಮೇಲ್ವಿಚಾರಕ ಅರುಣ, ಸೇವಾ ಪ್ರತಿನಿಧಿ ಗೀತಾ ಮುಂತಾದವರು ಉಪಸ್ಥಿತರಿದ್ದರು.
ವರದಿ: ಗಿರೀಶ್ ಕೆ ಭಟ್

