Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ಪ್ರತಿದಿನ 2 ಅತ್ಯಾಚಾರ ಪ್ರಕರಣ ದಾಖಲು : ವರದಿ

Advertisement

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯ ಮೇಲಿನ ಅತ್ಯಚಹಾರ, ಲೈಂಗಿಕ ದೌರ್ಜನ್ಯ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಳೆದ ಎರಡು ವರ್ಷಗಳಲ್ಲಿ ದಾಖಲಾಗಿರುವ ಪ್ರಕರಣ ನೋಡಿದರೆ ಬೆಚ್ಚಿ ಬೀಳಿಸುವಂತಿದೆ.


ರಾಜ್ಯದಲ್ಲಿ ಪ್ರತಿದಿನ 2 ಅತ್ಯಾಚಾರ ಪ್ರಕರಣ, 16 ಲೈಂಗಿಕ ದೌರ್ಜನ್ಯ ಪ್ರಕರಣಗಳು ನಡೆಯುತ್ತಿವೆ.ಕಳೆದ ಎರಡು ವರ್ಷಗಳಲ್ಲಿ 1888 ರೇಪ್ ಕೇಸ್ ಗಳು ದಾಖಲಾಗಿವೆ. ಆದರೆ ಶಿಕ್ಷೆ ಪ್ರಮಾಣ ಮಾತ್ರ ಶೂನ್ಯವಾಗಿದೆ.

ಕಳೆದ ಎರಡುವರೆ ವರ್ಷಗಳಲ್ಲಿ 1888 ಅತ್ಯಾಚಾರ ಪ್ರಕರಣಗಳಲ್ಲಿ 2143 ಆರೋಪಿಗಳನ್ನು ಬಂಧಿಸಲಾಗಿದೆ. 2025ರ ಜುಲೈ ಅಂತ್ಯಕ್ಕೆ ರಾಜ್ಯದಲ್ಲಿ 549 ಪ್ರಕರಣಗಳಲ್ಲಿ 407 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.2024ರಲ್ಲಿ 739 ಪ್ರಕರಣಗಳಲ್ಲಿ 969 ಹಾಗೂ 2023ರಲ್ಲಿ 600 ಕೇಸ್ ಗಳಲ್ಲಿ 767 ಆರೋಪಿಗಳನ್ನು ಬಂಧಿಸಲಾಗಿದೆ.

ಒಟ್ಟು ದಾಖಲಾಗಿರುವ 1888 ಪ್ರಕರಣಗಳಲ್ಲಿ 2143 ಪ್ರಕರಣಗಳು ವಿಚಾರಣೆ ಹಂತದಲ್ಲಿದೆ. 83 ಪ್ರಕರಣಗಳು ಖುಲಾಸೆಗೊಂಡಿವೆ ಎಂದು ಗೃಹ ಇಲಾಖೆ ನೀಡಿದ ಅಂಕಿ-ಅಂಶಗಳಿಂದ ಬಹಿರಂಗವಾಗಿದೆ.

ರಾಜ್ಯದಲ್ಲಿ ಪ್ರತಿದಿನ ಎರಡರಿಂದ ಮೂರು ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿವೆ. ಲೈಂಗಿಕ ಕಿರುಕುಳ, ಗಂಡನಿಂದ ಕಿರುಕುಳ ಪ್ರಕರಣ ಸಂಖ್ಯೆಯೂ ಯಥಾಸ್ಥಿತಿಯಲ್ಲಿದೆ.

ಎರಡೂವರೆ ವರ್ಷಗಳಲ್ಲಿ 16,273 ಪ್ರಕರಣಗಳಿಂದ 16,312 ಆರೋಪಿಗಳನ್ನು ಬಂಧಿಸಲಾಗಿದೆ. ದಿನಕ್ಕೆ ಸರಾಸರಿ 16 ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ. ಈ ಪೈಕಿ 189 ಪ್ರಕರಣಗಳಲ್ಲಿ ಮಾತ್ರ ಅಪರಾಧಿಗಳಿಗೆ ಶಿಕ್ಷೆ ಕೊಡಿಸುವಲ್ಲಿ ಪೊಲೀಸರು ಶಕ್ತರಾಗಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ