ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುರಿತಾದ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಸಚಿವ ಸತೀಶ್ ಜಾರಕಿಹೊಳಿ, ಅವರು ಪಕ್ಷದೊಂದಿಗೆ ಮುಂದುವರಿಯಲಿದ್ದು, ಪಕ್ಷಕ್ಕೆ ಮಾರ್ಗದರ್ಶನ ನೀಡಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಅವರು, "ಸಿದ್ದರಾಮಯ್ಯನವರು ಎಲ್ಲಿಯೂ ಹೋಗುವುದಿಲ್ಲ, ಅವರು ನಮ್ಮೊಂದಿಗೇ ಇರುತ್ತಾರೆ.
2028ರ ವಿಧಾನಸಭಾ ಚುನಾವಣೆಯೂ ಕೂಡ ಅವರ ಮಾರ್ಗದರ್ಶನದಲ್ಲೇ ನಡೆಯಲಿದೆ," ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅವರು ನಮ್ಮೊಂದಿಗೇ ಇರುತ್ತಾರೆ ಮತ್ತು ನಮಗೆ ಮಾರ್ಗದರ್ಶನ ನೀಡುತ್ತಾರೆ… 2028ರ ಚುನಾವಣೆಯೂ ಅವರ ಮಾರ್ಗದರ್ಶನದಲ್ಲೇ ನಡೆಯಲಿದೆ…" ಎಂದು ಸ್ಪಷ್ಟಪಡಿಸಿದ್ದಾರೆ.
ಇನ್ನು ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿರುವ 'ಸಚಿವ ಸಂಪುಟ ಪುನಾರಚನೆ' ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, "ಈ ಬಗ್ಗೆ ಚರ್ಚೆಗಳು ನಾಳೆ ನಡೆಯಲಿವೆ," ಎಂದು ತಿಳಿಸಿದ್ದಾರೆ.ಈ ಹೇಳಿಕೆಯು ಸದ್ಯ ರಾಜ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಮಹತ್ವ ಪಡೆದುಕೊಂಡಿದೆ.


