Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

21 ವರ್ಷಗಳ ಹಿಂದೆ ನಟಿ ಸೌಂದರ್ಯ ಸಾವು ಪ್ರಕರಣಕ್ಕೆ ಹೊಸ ಟ್ವೀಸ್ಟ್

Advertisement
ಕನ್ನಡ ನಟಿ ಸೌಂದರ್ಯ 2004 ಜುಲೈ 7ರಂದು ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದರು. ಆದರೆ ಇದು ಅಪಘಾತವಲ್ಲ ಕೊಲೆ ಎಂದು ವ್ಯಕ್ತಿಯೊಬ್ಬರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ನಟಿ ಸೌಂದರ್ಯ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿಲ್ಲ, ಅವರನ್ನು ಕೊಲೆ ಮಾಡಲಾಗಿದೆ ಎಂದು ಸ್ಟಾರ್ ನಟನ ವಿರುದ್ಧ ದೂರು ದಾಖಲಿಸಲಾಗಿದೆ.

ಬಹುಭಾಷೆಯಲ್ಲಿ ಸಿನಿಮಾ ಮಾಡಿದ ಸೌಂದರ್ಯ ಕರ್ನಾಟಕದಲ್ಲೂ ಪ್ರಸಿದ್ಧ ನಟಿ. ಆದರೆ ಅವರು ಕೇವಲ 31ನೇ ವಯಸ್ಸಿನಲ್ಲಿ ಜಗತ್ತಿಗೆ ವಿದಾಯ ಹೇಳಿದರು. 2004 ಏಪ್ರಿಲ್ 17ರಂದು ಸೌಂದರ್ಯ ಅವರು ಭಾರತೀಯ ಜನತಾ ಪಕ್ಷ ಮತ್ತು ತೆಲುಗು ದೇಶಂ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಕರೀಂನಗರಕ್ಕೆ ಹೋಗುತ್ತಿದ್ದಾಗ ಅವರ ಖಾಸಗಿ ವಿಮಾನ ಅಪಘಾತಕ್ಕೀಡಾಗಿ ಅವರು ನಿಧನರಾದರು.

ವಿಮಾನ ಅಪಘಾತದಲ್ಲಿ ಅವರ ದೇಹ ಸುಟ್ಟು ಕರಕಲಾಗಿ ಹೋಗಿತ್ತು. ಕೊನೆಯದಾಗಿ ಕುಟುಂಬಕ್ಕೆ ಅವರ ಮುಖ ನೋಡಲು ಕೂಡ ಆಗಲಿಲ್ಲ. ಈ ದುರಂತ ಘಟನೆ ನಡೆದು 21 ವರ್ಷಗಳು ಕಳೆದಿವೆ. ಈ ಪ್ರಕರಣದಲ್ಲಿ ಈಗ ಒಬ್ಬ ಸ್ಟಾರ್ ನಟನ ಹೆಸರು ಬೆಳಕಿಗೆ ಬರುತ್ತಿದೆ. ಟಾಲಿವುಡ್ ನ ಖ್ಯಾತ ಹಿರಿಯ ನಟ ಮೋಹನ್ ಬಾಬು ವಿರುದ್ಧ ದೂರು ದಾಖಲಿಸಲಾಗಿದೆ. ನಟಿ ಸೌಂದರ್ಯ ಅವರ ಸಾವಿಗೆ ನಟ ಮೋಹನ್ ಬಾಬು ಕಾರಣ ಎಂದು ದೂರಿನಲ್ಲಿ ಹೇಳಲಾಗಿದೆ. ಚಿಟ್ಟಿಮಲ್ಲು ಎಂಬಾತ ಖಮ್ಮಂ ಎಸಿಪಿ ಮತ್ತು ಖಮ್ಮಂ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ದೂರಿನ ಪ್ರಕಾರ, ಕನ್ನಡ ನಟಿ ಸೌಂದರ್ಯ ಅವರು ಶಂಷಾಬಾದ್ ಪ್ರದೇಶದ ಜಲ್ಪಲ್ಲಿ ಗ್ರಾಮದಲ್ಲಿ 6 ಎಕರೆ ಭೂಮಿಯನ್ನು ಖರೀದಿಸಿದ್ದರು. ಮೋಹನ್ ಬಾಬು ಅವರಿಗೆ ಆ ಭೂಮಿ ಮೇಲೆ ಕಣ್ಣು ಬಿದ್ದಿತ್ತು. ಹೀಗಾಗಿ ಆ ಭೂಮಿಯನ್ನು ಮಾರಾಟ ಮಾಡಲು ಮೋಹನ್ ಬಾಬು ಸಂದರ್ಯ ಹಾಗೂ ಅವರ ಸಹೋದರನನ್ನು ಕೇಳಿದ್ದರು. ಆದರೆ ನಟಿ ಸೌಂದರ್ಯ ಮತ್ತು ಅವರ ಸಹೋದರ ಅಮರನಾಥ್ ಆ ಭೂಮಿಯನ್ನು ಮಾರಾಟ ಮಾಡಲು ಒಪ್ಪಲಿಲ್ಲ. ಈ ವಿಷಯವಾಗಿ ಇಬ್ಬರ ನಡುವೆ ಮನಸ್ತಾಪ ಉಂಟಾಗಿತ್ತು. ಇದೇ ಕಾರಣಕ್ಕೆ ಮೋಹನ್ ಬಾಬು ದ್ವೇಷ ಹೊಂದಿದ್ದರು ಎಂದು ದೂರುದಾರ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ