Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದಿನಿಂದ ಬಂಡೀಪುರ ಅರಣ್ಯದಲ್ಲಿ ಶೃಂಗಸಭೆ : 23 ದೇಶಗಳು ಭಾಗಿ

Advertisement
ಬೆಂಗಳೂರು : ಇಂದಿನಿಂದ 2 ದಿನಗಳ ಕಾಲ ಬಂಡೀಪುರ ಹುಲಿ ಮೀಸಲು ಅರಣ್ಯದಲ್ಲಿ ಶೃಂಗಸಭೆ ನಡೆಯಲಿದ್ದು, ಬಿಗ್ ಕ್ಯಾಟ್ ಶೃಂಗಸಭೆ ಹೆಸರಿನಲ್ಲಿ ಹುಲಿಗಳ ಕುರಿತಾದ ಸೆಮಿನಾರ್ ಆಯೋಜನೆ ಮಾಡಲಾಗಿದೆ. ಬಂಡಿಪುರ ಟೈಗರ್ ರಿಸರ್ವ್ ಫಾರೆಸ್ಟ್ ಸಿಬ್ಬಂದಿಯಿಂದ ಈ ಶೃಂಗಸಭೆ ಆಯೋಜನೆ ಮಾಡಲಾಗಿದೆ.

ಈ ಒಂದು ಸಭೆಯಲ್ಲಿ ಬರೋಬ್ಬರಿ 23 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ರಾಜ್ಯದಲ್ಲಿಯೇ ಬಿಗ್ ಕ್ಯಾಟ್ ಶೃಂಗಸಭೆ ಹೊಸ ಇತಿಹಾಸ ಸೃಷ್ಟಿಸಲಿದೆ. ಅರ್ಮೆನಿಯ, ಭೂತಾನ್, ಕಾಂಗೋ, ಮೆಕ್ಸಿಕೋ ಕಿನ್ಯಾ ಹಾಗು ರಷ್ಯಾಸೇರಿದಂತೆ 23 ದೇಶಗಳ ಸಂಶೋಧಕರು ಈ ಒಂದು ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಅಂತಾರಾಷ್ಟ್ರೀಯ ಮಟ್ಟದ ಶೃಂಗಸಭೆ ಕರ್ನಾಟಕದಲ್ಲಿ ನಡೆಯುತ್ತಿರುವುದು ಮಹತ್ವ ಪಡೆದಿದೆ. ದಕ್ಷಿಣ ಭಾರತದ ವನ್ಯಜೀವಿ ಸಂರಕ್ಷಣೆ ಹಾಗೂ ಅತಿ ಹೆಚ್ಚಾಗಿರುವ ಹುಲಿಗಳ ಬಗ್ಗೆ ಈ ಶೃಂಗಸಭೆಯಲ್ಲಿ ಜಾಗತಿಕ ಗಮನ ಸೆಳೆಯಲಿದೆ. ಫೆಬ್ರವರಿ 9 ಮತ್ತು 10 ರಂದು ಬಂಡಿಪುರದಲ್ಲಿ ಹಾಗೂ ಫೆಬ್ರವರಿ 11 ಮತ್ತು 13 ರಂದು ನಾಗರಹೊಳೆಯಲ್ಲಿ ಈ ಶೃಂಗಸಭೆ ನಡೆಯಲಿದೆ.

ನಾಲ್ಕು ದಿನಗಳ ಶೃಂಗಸಭೆಯಲ್ಲಿ ಹುಲಿಗಳ ಸಂರಕ್ಷಣೆ ಕುರಿತಂತೆ ಚರ್ಚೆ ನಡೆಯಲಿದೆ. ಅದರಲ್ಲೂ ಆಧುನಿಕ ತಂತ್ರಜ್ಞಾನ ಬಳಕೆ, ಅಂತಾರಾಷ್ಟ್ರೀಯ ಸಹಕಾರ ಹಾಗೂ ಉತ್ತಮ ಕಾರ್ಯ ನಿರ್ವಹಣೆ ಕುರಿತು ಸಮಾಲೋಚನೆ ಕೂಡ ನಡೆಯಲಿದೆ.

ಕರ್ನಾಟಕ ಹಾಗೂ ಮಧ್ಯಪ್ರದೇಶ ಸೇರಿದಂತೆ ಇತರೆಡೆ ಹುಲಿ ವಾಸಸ್ಥಾನಗಳಲ್ಲಿ ಅಭಿವೃದ್ಧಿ ಯೋಜನೆಗಳ ನಿಯಂತ್ರಣ, ಅರಣ್ಯದಲ್ಲಿರುವ ಗಿರಿಜನರ ಪುನರ್ವಸತಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ದೇಶ-ವಿದೇಶದ ತಜ್ಞರು ತಮ್ಮ ತಮ್ಮ ಅಭಿಪ್ರಾಯವನ್ನು ಇಲ್ಲಿ ದಾಖಲು ಮಾಡಲಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ