Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದಿನಿಂದ ಬಂಡೀಪುರ ಅರಣ್ಯದಲ್ಲಿ ಶೃಂಗಸಭೆ : 23 ದೇಶಗಳು ಭಾಗಿ

Advertisement
ಬೆಂಗಳೂರು : ಇಂದಿನಿಂದ 2 ದಿನಗಳ ಕಾಲ ಬಂಡೀಪುರ ಹುಲಿ ಮೀಸಲು ಅರಣ್ಯದಲ್ಲಿ ಶೃಂಗಸಭೆ ನಡೆಯಲಿದ್ದು, ಬಿಗ್ ಕ್ಯಾಟ್ ಶೃಂಗಸಭೆ ಹೆಸರಿನಲ್ಲಿ ಹುಲಿಗಳ ಕುರಿತಾದ ಸೆಮಿನಾರ್ ಆಯೋಜನೆ ಮಾಡಲಾಗಿದೆ. ಬಂಡಿಪುರ ಟೈಗರ್ ರಿಸರ್ವ್ ಫಾರೆಸ್ಟ್ ಸಿಬ್ಬಂದಿಯಿಂದ ಈ ಶೃಂಗಸಭೆ ಆಯೋಜನೆ ಮಾಡಲಾಗಿದೆ.

ಈ ಒಂದು ಸಭೆಯಲ್ಲಿ ಬರೋಬ್ಬರಿ 23 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ರಾಜ್ಯದಲ್ಲಿಯೇ ಬಿಗ್ ಕ್ಯಾಟ್ ಶೃಂಗಸಭೆ ಹೊಸ ಇತಿಹಾಸ ಸೃಷ್ಟಿಸಲಿದೆ. ಅರ್ಮೆನಿಯ, ಭೂತಾನ್, ಕಾಂಗೋ, ಮೆಕ್ಸಿಕೋ ಕಿನ್ಯಾ ಹಾಗು ರಷ್ಯಾಸೇರಿದಂತೆ 23 ದೇಶಗಳ ಸಂಶೋಧಕರು ಈ ಒಂದು ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಅಂತಾರಾಷ್ಟ್ರೀಯ ಮಟ್ಟದ ಶೃಂಗಸಭೆ ಕರ್ನಾಟಕದಲ್ಲಿ ನಡೆಯುತ್ತಿರುವುದು ಮಹತ್ವ ಪಡೆದಿದೆ. ದಕ್ಷಿಣ ಭಾರತದ ವನ್ಯಜೀವಿ ಸಂರಕ್ಷಣೆ ಹಾಗೂ ಅತಿ ಹೆಚ್ಚಾಗಿರುವ ಹುಲಿಗಳ ಬಗ್ಗೆ ಈ ಶೃಂಗಸಭೆಯಲ್ಲಿ ಜಾಗತಿಕ ಗಮನ ಸೆಳೆಯಲಿದೆ. ಫೆಬ್ರವರಿ 9 ಮತ್ತು 10 ರಂದು ಬಂಡಿಪುರದಲ್ಲಿ ಹಾಗೂ ಫೆಬ್ರವರಿ 11 ಮತ್ತು 13 ರಂದು ನಾಗರಹೊಳೆಯಲ್ಲಿ ಈ ಶೃಂಗಸಭೆ ನಡೆಯಲಿದೆ.

ನಾಲ್ಕು ದಿನಗಳ ಶೃಂಗಸಭೆಯಲ್ಲಿ ಹುಲಿಗಳ ಸಂರಕ್ಷಣೆ ಕುರಿತಂತೆ ಚರ್ಚೆ ನಡೆಯಲಿದೆ. ಅದರಲ್ಲೂ ಆಧುನಿಕ ತಂತ್ರಜ್ಞಾನ ಬಳಕೆ, ಅಂತಾರಾಷ್ಟ್ರೀಯ ಸಹಕಾರ ಹಾಗೂ ಉತ್ತಮ ಕಾರ್ಯ ನಿರ್ವಹಣೆ ಕುರಿತು ಸಮಾಲೋಚನೆ ಕೂಡ ನಡೆಯಲಿದೆ.

ಕರ್ನಾಟಕ ಹಾಗೂ ಮಧ್ಯಪ್ರದೇಶ ಸೇರಿದಂತೆ ಇತರೆಡೆ ಹುಲಿ ವಾಸಸ್ಥಾನಗಳಲ್ಲಿ ಅಭಿವೃದ್ಧಿ ಯೋಜನೆಗಳ ನಿಯಂತ್ರಣ, ಅರಣ್ಯದಲ್ಲಿರುವ ಗಿರಿಜನರ ಪುನರ್ವಸತಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ದೇಶ-ವಿದೇಶದ ತಜ್ಞರು ತಮ್ಮ ತಮ್ಮ ಅಭಿಪ್ರಾಯವನ್ನು ಇಲ್ಲಿ ದಾಖಲು ಮಾಡಲಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ