Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿರೋಧ ಪಕ್ಷದ ಶಾಸಕರಿಗೆ 25 ಕೋಟಿ ರೂ. ಅನುದಾನ ಬಿಡುಗಡೆ 

Advertisement
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಅಷ್ಟೇ ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಕ್ಷೇತ್ರದ ಅಭಿವೃದ್ಧಿಗಳಿಗೆ 50 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದರು.

ಇದೀಗ ವಿರೋಧ ಪಕ್ಷದ ಶಾಸಕರಿಗೆ ಕೂಡ ಸಿಎಂ ಸಿದ್ದರಾಮಯ್ಯ ತಲಾ 25 ಕೋಟಿ ಅನುದಾನ ಬಿಡುಗಡೆಗೆ ತೀರ್ಮಾನಿಸಿದ್ದಾರೆ.

ಕೇವಲ ಕಾಂಗ್ರೆಸ್ ಶಾಸಕರಿಗೆ ಮಾತ್ರ‌ ಅನುದಾನ ನೀಡಲಾಗುತ್ತಿದೆ ಎಂದು ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಅಧಿವೇಶನದಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದರು. ತಮಗೂ ಅನುದಾನ ಬಿಡುಗಡೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ವಿಪಕ್ಷಗಳ ಶಾಸಕರಿಗೂ ತಲಾ 25 ಕೋಟಿ ರೂ. ಅನುದಾನ ಮಂಜೂರು ಮಾಡಿದ್ದಾರೆ.

ಅನುದಾನ ಹಂಚಿಕೆ ಸಂಬಂಧ ಪ್ರತಿಪಕ್ಷ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. 2025-26ನೇ ಸಾಲಿನ ರಾಜ್ಯ ಆಯವ್ಯಯದಲ್ಲಿ ಘೋಷಿಸಿದಂತೆ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ತಮ್ಮ ವಿಧಾನಸಭಾ ಕ್ಷೇತ್ರಕ್ಕೆ 25 ಕೋಟಿ ರೂ. ವಿಶೇಷ ಅನುದಾನ ಹಂಚಿಕೆ ಮಾಡಲು ತೀರ್ಮಾನಿಸಲಾಗಿದೆ.

ಅದರನ್ವಯ ಕಾಮಗಾರಿವಾರು ಅನುದಾನದ ಹಂಚಿಕೆಯ ಪ್ರಮಾಣವನ್ನು ನಿಗದಿಪಡಿಸಿದ್ದು, ಇಲಾಖಾವಾರು ಕಾಮಗಾರಿಗಳ ವಿವರಗಳನ್ನು ಮುಂದಿನ ಕ್ರಮಕ್ಕಾಗಿ ಆರ್ಥಿಕ ಇಲಾಖೆಗೆ ಸಲ್ಲಿಸಲು ಕೋರಿದೆ ಎಂದಿದ್ದಾರೆ.

ಲೋಕೋಪಯೋಗಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳಡಿ ಬರುವ ರಸ್ತೆ ಮತ್ತು ಸೇತುವೆ ಕಾಮಗಾರಿಗಳು ಹಾಗೂ ನಗರಾಭಿವೃದ್ಧಿ ಇಲಾಖೆಯಡಿ ಬರುವ ನಗರ ಪ್ರದೇಶದ ಕಾಮಗಾರಿಗಳಿಗೆ 18.75 ಕೋಟಿ ರೂ. ಅನುದಾನ ನೀಡಲಾಗುವುದು. ಇತ್ತ ವಿವೇಚನಾಧಿಕಾರದಡಿ ವಿಧಾನಸಭಾ ಸದಸ್ಯರು ಆಯ್ಕೆ ಮಾಡಬಹುದಾದ ಇತರೆ ಇಲಾಖೆಯ ಕಾಮಗಾರಿಗಳಿಗೆ 6.25 ಕೋಟಿ ರೂ. ನೀಡಲು ತೀರ್ಮಾನಿಸಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ