LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಗೃಹಲಕ್ಷ್ಮಿ ಯೋಜನೆಗೆ 3 ವರ್ಷದ ಸಂಭ್ರಮ : ಗುಲಾಬಿ ಬಣ್ಣದಲ್ಲಿ ಮಿಂಚಲಿವೆ ಸರ್ಕಾರಿ ಕಟ್ಟಡಗಳು 

Advertisement

ಬೆಂಗಳೂರು: ರಾಜ್ಯ ಸರ್ಕಾರದ (Karnataka Government) ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಜನಪ್ರಿಯವಾಗಿರುವ 'ಗೃಹಲಕ್ಷ್ಮಿ' (Gruha Lakshmi) ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರ್ಣಗೊಳಿಸಿದ್ದು, ಈ ವಿಶೇಷ ಮೈಲಿಗಲ್ಲನ್ನು ವಿಶಿಷ್ಟವಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ.

ಈ ಮೂರನೇ ವರ್ಷದ ಸಂಭ್ರಮಾಚರಣೆಯ ಸವಿನೆನಪಿಗಾಗಿ ರಾಜ್ಯದ ಪ್ರಮುಖ ಐತಿಹಾಸಿಕ ಕಟ್ಟಡಗಳು ಹಾಗೂ ಸರ್ಕಾರಿ ಸೌಧಗಳು (Vidhan Soudha) ಗುಲಾಬಿ ಬಣ್ಣದ ದೀಪಾಲಂಕಾರದಿಂದ ಕಂಗೊಳಿಸಲಿವೆ.

ಆಗಸ್ಟ್ 30 ರಂದು ಕಂಗೊಳಿಸಲಿದೆ ಕಟ್ಟಡಗಳು

ಮಹಿಳಾ ಸಬಲೀಕರಣದ ಸಂಕೇತವಾಗಿರುವ ಈ ಸಂಭ್ರಮಕ್ಕಾಗಿ ರಾಜಧಾನಿ ಬೆಂಗಳೂರಿನ ವಿಧಾನಸೌಧ, ಬೆಳಗಾವಿಯ ಸುವರ್ಣ ಸೌಧ ಹಾಗೂ ವಿಶ್ವಪ್ರಸಿದ್ಧ ಮೈಸೂರು ಅರಮನೆಯನ್ನು ವಿಶೇಷ ಪಿಂಕ್ (ಗುಲಾಬಿ) ಲೈಟ್‌ಗಳಿಂದ ಶೃಂಗರಿಸಲಾಗುತ್ತಿದೆ. ಇದರೊಂದಿಗೆ ಐತಿಹಾಸಿಕ ಹಿನ್ನೆಲೆಯುಳ್ಳ ಚಿತ್ರದುರ್ಗದ ಕಲ್ಲಿನ ಕೋಟೆ, ಹಂಪಿಯ ಪ್ರಸಿದ್ಧ ಕಲ್ಲಿನ ರಥ, ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡ ಹಾಗೂ ಬೆಳಗಾವಿಯ ಕಿತ್ತೂರು ಚೆನ್ನಮ್ಮ ವೃತ್ತ ಸೇರಿದಂತೆ ರಾಜ್ಯದ ಪ್ರಮುಖ ಸಾಂಸ್ಕೃತಿಕ ಕೇಂದ್ರಗಳು ಗುಲಾಬಿ ದೀಪಗಳ ಬೆಳಕಿನಲ್ಲಿ ಮಿನುಗಲಿವೆ.

ಭಾನುವಾರ (ಆಗಸ್ಟ್ 30) ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಈ ಎಲ್ಲಾ ಪ್ರಮುಖ ತಾಣಗಳು ಮತ್ತು ಸ್ಮಾರಕಗಳು ಪಿಂಕ್ ಬೆಳಕಿನಿಂದ ಕಂಗೊಳಿಸಲಿದ್ದು, ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ಈ ಸೌಂದರ್ಯವನ್ನು ಕಣ್ಣುಂಬಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಟೈರ್ ಬ್ಲಾಸ್ಟ್, ಕಾರಿನ ಮೇಲೆ ಟ್ರಕ್‌ ಪಲ್ಟಿ : ತಪ್ಪಿದ ಭಾರೀ ಅನಾಹುತಹುಕ್ಕೇರಿ ತಾಲೂಕು ಪಡಿತರ ಚೀಟಿ ಸರ್ವೇ ಕಾರ್ಯದ ತಾಂತ್ರಿಕ ತೊಂದರೆ ನಿವಾರಣೆಗೆ ಆಗ್ರಹಬೆಳಗಾವಿ ಜಿಲ್ಲೆಯನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸದ ಸರ್ಕಾರಅಮೆರಿಕದಲ್ಲಿ ಮಗಳ ಮದುವೆ : ಆನ್‌ಲೈನ್‌ನಲ್ಲಿ ಅಕ್ಷತೆ ಹಾಕಿ ಆಶೀರ್ವದಿಸಿದ ಪೋಷಕರುರೈಲು ಡಿಕ್ಕಿಯಾಗಿ ವೃದ್ದೆ, ಇಬ್ಬರು ಮೊಮ್ಮಕ್ಕಳು ದುರ್ಮರಣಸೆಪ್ಟೆಂಬರ್ 1ರಿಂದ 10ರವರೆಗೆ ಬಿಜೆಪಿ ಬಳ್ಳಾರಿ ಪಾದಯಾತ್ರೆ: ರೂಟ್ ಮ್ಯಾಪ್ ರೆಡಿ9 ಗಂಟೆಯಲ್ಲಿ 40 ಎಕರೆ ಎಡೆ ಹೊಡೆದ ವಿಜಯಪುರದ ಎತ್ತುಗಳುಪ್ರೇಯಿಸಿ ಮೊಬೈಲ್‌ ನಂಬರ್‌ ಬ್ಲಾಕ್‌ಗೆ ಹಾಕಿದ್ದಕ್ಕೆ ಟವರ್ ಕುಳಿತ ಯುವಕ : ಪ್ರೇಯಸಿ ಬರುತ್ತಿದ್ದಂತೆ ಇಳಿದಅನುಮಾನಾಸ್ಪದವಾಗಿ ಯುವಕ ಸಾವು : ಹೊಟ್ಟೆಯಲ್ಲಿ ಲೈಟರ್, ಬ್ಯಾಟರಿ ಸೆಲ್, ಬೀಗದ ಕೀಗಳು ಪತ್ತೆ ಪಾಕ್ ವಿರುದ್ಧ ಟೆಸ್ಟ್ ಸರಣಿ ಗೆದ್ದ ಇಂಗ್ಲೆAಡ್