Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಸ್ಕಾಂ ಇಲಾಖೆಗೆ 34 ಲಕ್ಷ ಬೆಲೆಬಾಳುವ ಲಾರಿ ಹಸ್ತಾಂತರ

Advertisement
ಮೊಳಕಾಲ್ಮುರು: ಶಾಸಕ ಎನ್ ವೈ ಗೋಪಾಲಕೃಷ್ಣ ಶುಕ್ರವಾರದಂದು ಬೆಸ್ಕಾಂ ಇಲಾಖೆಗೆ 34 ಲಕ್ಷ ಬೆಲೆಬಾಳುವ ಲಾರಿ ಹಸ್ತಾಂತರಿಸಿದರು ಮತ್ತು ವಾಲ್ಮೀಕಿ ಭವನದ ಕಟ್ಟಡದ ಅಂತಿಮ ಹಂತದ ಕಾಮಗಾರಿಯನ್ನು ವೀಕ್ಷಿಸಿದರು.

ಬೆಸ್ಕಾಂ ಇಲಾಖೆಯಿಂದ ಮೊಳಕಾಲ್ಮೂರು ಬೆಸ್ಕಾಂ ಉಪ ವಿಭಾಗದ ಕಚೇರಿಗೆ ನೂತನ ಲಾರಿಯ ವಾಹನವನ್ನು ಪಟ್ಟಣದಲ್ಲಿ ಬೆಸ್ಕಾಂ ಕಚೇರಿ ಆವರಣದಲ್ಲಿ ಹಸ್ತಾಂತರಿಸಿದರು, 34 ಲಕ್ಷ ರೂಪಾಯಿ ಬೆಲೆಬಾಳುವ ಈ ವಾಹನವು ಬೆಸ್ಕಾಂ ಇಲಾಖೆಯ ಟ್ರಾನ್ಸ್ಫಾರಂ ವಿದ್ಯುತ್ ವೈರ್ ಗಳು ಹಾಗೂ ವಿದ್ಯುತ್ ಕಂಬಗಳು ಸೇರಿದಂತೆ ಬೃಹತ್ ಪ್ರಮಾಣ ಸಾಮಗ್ರಿಗಳನ್ನು ಹೊತ್ತಯ್ಯುವ ಲಾರಿ ಇದಾಗಿದೆ, ಇದರಿಂದ ಬೆಸ್ಕಾಂ ಇಲಾಖೆಗೆ ಬೇರಡೆಗೆ ವಿದ್ಯುತ್ ಸಾಮಾಗ್ರಿಗಳನ್ನು ಸಾಗಿಸಲು ಅನುಕೂಲವಾಗುತ್ತದೆ ಇದರಿಂದ ಬೆಸ್ಕಾಂ ಇಲಾಖೆಗೆ ಅನುಕೂಲವಾಗಿದೆ.

ಅದೇ ರೀತಿ ಈ ಭಾಗದ ಪ್ರಮುಖ ಬೇಡಿಕೆಯಾದ ವಾಲ್ಮೀಕಿ ಭವನವು ಅಂತಿಮ ಹಂತದ ಸಿದ್ಧತೆಗಳನ್ನು ನಾಯಕ ಸಮುದಾಯದ ಮುಖಂಡರ ಜೊತೆ ವೀಕ್ಷಿಸಿದರು.ಮುಂದಿನ ತಿಂಗಳ ಒಳಗಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಸ್ಥಳದಲ್ಲಿದ್ದ ಕೆಆರ್ ಐಡಿಎಲ್ ಎ ಇ ಇ ನಟರಾಜ್ ಗೆ ಸೂಚಿಸಿದರು. ಈ ವಾಲ್ಮೀಕಿ ಭವನವು ಈ ಭಾಗದಲ್ಲಿ ಬಡವರಿಗೆ ಅನುಕೂಲವಾಗುತ್ತದೆ. ಕೆಲವೇ ದಿನಗಳಲ್ಲಿ ಉದ್ಘಾಟನೆಗೆ ರೆಡಿಯಾಗಬೇಕು ಎಂದು ಇಂಜಿನಿಯರಿಗಳಿಗೆ ಎಚ್ಚರಿಕೆ ನೀಡಿ ವಾಲ್ಮೀಕಿ ಮುಖಂಡರ ಜೊತೆ ಅಡಿಗೆ ಕೊಟ್ಟಡಿ ಮದುವೆ ಮಂಟಪದ ಒಳಾಂಗಣ ಪಾರ್ಕಿಂಗ್ ವ್ಯವಸ್ಥೆ ಎಲ್ಲಾ ವಿಚಾರವಾಗಿ ವೀಕ್ಷಣೆ ಮಾಡಿ ಕೆಲವೇ ದಿನಗಳಲ್ಲಿ ಉದ್ಘಾಟನೆಗೆ ತಯಾರು ಮಾಡಬೇಕು ಎಂದು ಇಂಜಿನಿಯರಿಗೆ ಎಚ್ಚರಿಸಿದರು.

ಈ ಸಂದರ್ಭದಲ್ಲಿ ತಹಸಿಲ್ದಾರರಾದ ಟಿ ಜಗದೀಶ್ ಬೆಸ್ಕಾಂ ಇಂಜಿನಿಯರಿಂಗ್ಗಳು ಮತ್ತು ಬೆಸ್ಕಾಂ ಸಿಬ್ಬಂದಿ ಮತ್ತು ಬೆಸ್ಕಾಂ ಗುತ್ತಿಗೆದಾರರಾದ ಜಬ್ಬರ್, ಗುತ್ತಿಗೆದಾರರು ಮತ್ತು ಪಟ್ಟಣ ಪಂಚಾಯತಿ ಸದಸ್ಯರಾದ ಎಸ್ ಖಾದರ್, ನಾಗಸಮುದ್ರ ಗೋವಿಂದಪ್ಪ,ನಾಮ ನಿರ್ದೇಶನ ಸದಸ್ಯರಾದ ಜಿ ಪ್ರಕಾಶ್ ಪಟ್ಟಣ ಪಂಚಾಯತಿ ಅಧ್ಯಕ್ಷರು ಸದಸ್ಯರು ಮುಖ್ಯ ಅಧಿಕಾರಿ ಮತ್ತು ವಾಲ್ಮೀಕಿ ಮುಖಂಡರಾದ ಪಟೇಲ್ ಜಿ ಪಾಪು ನಾಯಕ್, ಜಗಳೂರಯ್ಯ ದೇವಯ್ಯ ಮಾರ ನಾಯಕ್ ಪ್ರೇಮ ಸುಧಾ ದೇವಯ್ಯ, ಸತ್ಯನಾರಾಯಣ, ಕಾಂಗ್ರೆಸ್ ಮುಖಂಡರಾದ ಯರ್ಜನಹಳ್ಳಿ ನಾಗರಾಜ್ ಬಿಟಿ ನಾಗಭೂಷಣ್, ಓಬಣ್ಣ ದೇವದಾಸ್ ಇನ್ನು ಹಲವರು ಉಪಸ್ಥಿತರಿದ್ದರು.

ವರದಿ: ಪಿಎಂ ಗಂಗಾಧರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ