Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೃಷ್ಣಾ ನದಿಯಿಂದ ಪ್ರವಾಹ: ನಡುಗಡ್ಡೆಯಲ್ಲಿ ಸಿಲುಕಿದ 40 ಕುಟುಂಬಗಳು

Advertisement
ಬೆಳಗಾವಿ : ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನಲೆ ಕೊಯ್ನಾ ಜಲಾಶಯಕ್ಕೆ ನೀರಿನ ಹೊರಹರಿವು ಹೆಚ್ಚಳವಾಗಿದ್ದು, ಕೃಷ್ಣಾ ನದಿ (Krishna River) ತುಂಬಿ ಹರಿಯುತ್ತಿದೆ. ಪರಿಣಾಮ ಬೆಳಗಾವಿ (Belagavi) ನದಿ ಪಾತ್ರದಲ್ಲಿದ್ದ ಸುಮಾರು ಗರ್ಬಿಣಿ ಸೇರಿದಂತೆ ಸುಮಾರು 40 ಕುಟುಂಬ ಸಿಲುಕಿಕೊಂಡಿದೆ.

ಮಹಾರಾಷ್ಟ್ರದಲ್ಲಿ ಕಳೆದ ಕೆಲ ದಿನಗಳಿಂದ ವರುಣ ಆರ್ಭಟಿಸುತ್ತಿದ್ದಾನೆ, ಈ ಹಿನ್ನಲೆ ಕೃಷ್ಣ ನದಿ ಉಕ್ಕಿ (Flooded) ಹರಿಯುತ್ತಿದೆ. ಅಷ್ಟೇ ಅಲ್ಲದೆ ಚಿಕ್ಕೋಡಿಯ ಉಪವಿಭಾಗದ ಕೃಷ್ಣ, ದೂದ ಗಂಗಾ, ವೇದಗಂಗಾ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದೆ.

ಇತ್ತ ಬೆಳಗಾವಿಯಲ್ಲಿ ಕೂಡ ಭಾರೀ ಮಳೆಯುತ್ತಿರುವ ಹಿನ್ನಲೆ ಅಥಣಿ ತಾಲೂಕಿನ ಹುಲಗಬಾಳ ಗ್ರಾಮದ ಮಾಂಗ ವಸತಿ ಪ್ರದೇಶವು ಸಂಪೂರ್ಣ ಜಲಾವೃತವಾಗಿದೆ. ಇದರಿಂದ ನೂರಾರು ಕುಟುಂಬ, ಜಾನುವಾರುಗಳು ನದಿಯ ನಡುಗಡ್ಡೆಯಲ್ಲೇ ಸಿಲುಕಿಕೊಂಡಿದ್ದಾರೆ.

ಕೃಷ್ಣಾ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವ ಪರಿಣಾಮ ಜಿಲ್ಲೆಯ ದೇವದುರ್ಗ ಮಾರ್ಗವಾಗಿ ಕಲಬುರಗಿಗೆ ಸಂಪರ್ಕ ಕಲ್ಪಿಸುವ ಹೂವಿನಹೆಡಗಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು, ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ದೇವದುರ್ಗ ತಾಲೂಕು ಆಡಳಿತವು ಬುಧವಾರ ಸಂಜೆಯಿಂದಲೇ ಸೇತುವೆ ಮೇಲೆ ವಾಹನ ಸಂಚಾರವನ್ನು ಬಂದ್ ಮಾಡಿದೆ.

ಕಳೆದ ಕೆಲದಿನಗಳಿಂದ ಬಿಡದೆ ಮಳೆ ಸುರಿದ ಪರಿಣಾಮ ಗ್ರಾಮಕ್ಕೆ ನದಿಯ ನೀರು ನುಗ್ಗಿದೆ. ಈಗಾಗಲೇ ಗ್ರಾಮಕ್ಕೆ ಸಂಪರ್ಕಿಸುತ್ತಿದ್ದ ಏಕೈಕ ರಸ್ತೆಯಲ್ಲಿ ಕೂಡ ಎದೆಯ ಮಟ್ಟಕ್ಕೆ ನೀರು ಬಂದಿದ್ದು, ಜನರ ನದಿಯ ನಡುವೆಯೇ ಸಿಲುಕಿಕೊಂಡಿದ್ದಾರೆ.

ಇಡೀ ಗ್ರಾಮವೇ ಸಂಪೂರ್ಣ ಜಲಾವೃತವಾಗಿದ್ದರೂ ಕೂಡ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಇನ್ನೂ ಕೂಡ ಸ್ಥಳಕ್ಕೆ ಆಗಮಿಸಿಲ್ಲ. ಅಷ್ಟೇ ಅಲ್ಲದೆ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಸಾಕಷ್ಟು ಬೋಟ್ ಗಳನ್ನು ತರಿಸಲಾಗಿದ್ದರೂ ಕೂಡ ಒಂದೇ ಒಂದು ಬೋಟ್ ಗಳನ್ನು ಕೂಡ ಕಳುಹಿಸಿಕೊಟ್ಟಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ