Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳ ಪೋಷಕರಿಗೆ ಶಾಕ್ : ಪಠ್ಯ ಪುಸ್ತಕಗಳ ದರ ಶೇ. 50ರಷ್ಟು ಏರಿಕೆ

Advertisement

ಬೆಂಗಳೂರು: 2026- 27ನೇ ಶೈಕ್ಷಣಿಕ ಸಾಲಿನ ಶಾಲಾ ಪಠ್ಯಪುಸ್ತಕಗಳ ಬೆಲೆಯನ್ನು ಕರ್ನಾಟಕ ಪಠ್ಯಪುಸ್ತಕ ಸಂಘ ಹೆಚ್ಚಳ ಮಾಡಿದ್ದು, ಕೆಲವು ಪುಸ್ತಕಗಳ ಬೆಲೆಯಲ್ಲಿ ಶೇಕಡ 50ರವರೆಗೆ ಹೆಚ್ಚಳ ಆಗಿದೆ.


ರಾಜ್ಯ ಪಠ್ಯಕ್ರಮ ಅನುಸರಿಸುವ ಖಾಸಗಿ ಶಾಲೆಗಳಿಗೆ ಅಗತ್ಯವಿರುವ ಪಠ್ಯಪುಸ್ತಕಗಳಿಗೆ ಬೇಡಿಕೆ ಸಲ್ಲಿಸಲು ಶಾಲಾ ಶಿಕ್ಷಣ ಇಲಾಖೆ ಇತ್ತೀಚಿಗೆ ಸೂಚನೆ ನೀಡಿತ್ತು.ಸೂಚನಾ ಪತ್ರದಲ್ಲಿ ನಮೂದಿಸಿದ ಪ್ರಕಾರ ಕೆಲವು ಪುಸ್ತಕಗಳ ಬೆಲೆ ಹೆಚ್ಚಳ ಮಾಡಲಾಗಿದೆ.

ಮೂರನೇ ತರಗತಿ ಪರಿಸರ ಅಧ್ಯಯನ ಪುಸ್ತಕದ ದರ 22 ರಿಂದ 45 ರೂ.ಗೆ ಹೆಚ್ಚಳವಾಗಿದೆ. ಎರಡನೇ ತರಗತಿಯ ಗಣಿತ(ಇಂಗ್ಲಿಷ್ ಭಾಗ-2) ಪಠ್ಯ ಪುಸ್ತಕ ದರ 25 ರಿಂದ 51 ರೂ.ಗೆ ಹೆಚ್ಚಳವಾಗಿದೆ.

ಒಂದರಿಂದ ಐದನೇ ತರಗತಿ ಹಿಂದೂಸ್ತಾನಿ ಮತ್ತು ಕರ್ನಾಟಕ ಸಂಗೀತ ವಿಷಯಗಳ ಪಠ್ಯಪುಸ್ತಕಗಳ ದರವನ್ನು ಎಲ್ಲಾ ಹಂತಗಳಲ್ಲೂ ಹೆಚ್ಚಳ ಮಾಡಲಾಗಿದೆ. ನಾಲ್ಕನೇ ತರಗತಿಯ ಪುಸ್ತಕದ ದರ 31 ರಿಂದ 51 ರೂ.ಗೆ, ಒಂದನೇ ತರಗತಿಯ ಮೃದಂಗ ಪುಸ್ತಕ ದರ 42 ರಿಂದ 60 ರೂ.ಗೆ ಏರಿಕೆಯಾಗಿದೆ.

ಪಠ್ಯಪುಸ್ತಕಗಳ ದರ ಹೆಚ್ಚಳಕ್ಕೆ ಕರ್ನಾಟಕ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ, ಮೊದಲೇ ಹೊಸ ದರದ ಪಟ್ಟಿಯನ್ನು ಸರ್ಕಾರ ಪ್ರಕಟಿಸಬೇಕಿತ್ತು. ಈಗ ವಿದ್ಯಾರ್ಥಿಗಳಿಂದ ಹೆಚ್ಚುವರಿ ಹಣ ವಸೂಲಿ ಮಾಡುವ ಪರಿಸ್ಥಿತಿಯಲ್ಲಿ ಶಾಲೆಗಳು ಇಲ್ಲ, ಬೆಲೆ ಏರಿಕೆ ತಡೆಯಲು ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ