Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹುಬ್ಬಳ್ಳಿಯ ಉಪ ಕಾರಾಗೃಹದಲ್ಲಿ 78 ನೇ ಸ್ವಾತಂತ್ರ ದಿನಾಚರಣೆ

Advertisement
ಹುಬ್ಬಳ್ಳಿ ಇಲ್ಲಿನ ಉಪ ಕಾರಾಗೃಹದಲ್ಲಿ 78 ನೇ ಸ್ವಾತಂತ್ರ ದಿನಾಚರಣೆಯನ್ನು ಆಚರಿಸಲಾಯಿತು.

ಬಾಗಲಕೋಟೆಯ 2 ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜಶೇಖರ ತಿಳಿಗಂಜಿ ಮಾತನಾಡಿ, ಅಂಗುಲಿಮಾಲಾ, ವಾಲ್ಮೀಕಿ ಅವರು ಮನಃ ಪರಿವರ್ತನೆಗೊಂಡ ಮಹಾನ್ ಸಾಧನೆ ಕೈಗೊಂಡ ಬಗ್ಗೆ ಕಾರಾಗೃಹದ ಬಂದಿಗಳಿಗೆ ಮನಃ ಪರಿವರ್ತನೆ ಕೈಗೊಳ್ಳುವಂತೆ ಮನ ಮುಟ್ಟುವಂತರ ತಿಳಿ ಹೇಳಿದರು. ಸರ್ಕಾರವು ಬಂದಿಗಳ ಮನಃ ಪರಿವರ್ತನೆಗಾಗಿ ನೀಡಿರುವ ಸೌಲಭ್ಯಗಳಾದ ಲೈಬ್ರರಿ, ವಿವಿಧ ಕರಕುಷಲಗಳ ಕಾರ್ಯಕ್ರಮದ ಸೌಲಭ್ಯಗಳನ್ನು ಸದ್ಭಳಕೆಯಿಂದ ಉಪಯೋಗಿಸಿಕೊಂಡು, ಸಮಾಜದ ಮುಖ್ಯ ವಾಹಿನಿಯಲ್ಲಿ ಉತ್ತಮ ಪ್ರಜೆಯಾಗಿ ಬದುಕಬೇಕು. ಅಂಗುಲಿಮಾಲಾ, ಶ್ರೀ ವಾಲ್ಮೀಕಿರವರ ಜೀವನವನ್ನು ಅದರ್ಶವಾಗಿ ತೆಗೆದುಕೊಂಡು ಸಮಾಜದಲ್ಲಿ ಉತ್ತಮವಾಗಿ ಬದುಕಿ ಎಂದು ಬಂದಿಗಳಿಗೆ ಶುಭ ಹಾರೈಸಿದರು.



ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಅಧೀಕ್ಷಕರಾದ ಶಹಾಬುದ್ದೀನ್ ಕಾಲೇಖಾನ್ ಮಾತನಾಡಿ, ಬುದ್ಧಂ ಶರಣಂ ಗಚ್ಛಾಮಿ, ಧರ್ಮಂ ಶರಣಂ ಗಚ್ಛಾಮಿ, ಸಂಗಂ ಶರಣಂ ಗಚ್ಛಾಮಿ ಭಗವಾನ್ ಬುದ್ಧನ ಜೀವನ ಮೌಲ್ಯಗಳನ್ನು ಬಂದಿ ನಿವಾಸಿಗಳಿಗೆ ತಿಳಿಸಿ ತಾವೂ ಕೂಡಾ ಬುದ್ಧನ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು. ಸ್ವಾತಂತ್ರ್ಯ ಹೋರಾಟಗಾರರಾದ ಮಹಾತ್ಮ ಗಾಂಧೀಜಿ, ಪಂಡಿತ ಜವಾಹರಲಾಲ ನೆಹರು, ಬಾಲಗಂಗಾಧರ ತಿಲಕ, ಜಿ.ಕೆ. ಗೋಕಲೆರವರೆಲ್ಲರೂ ಜೈಲಿಗೆ ಬಂದದ್ದು ಒಳ್ಳೆಯ ಕಾರಣಕ್ಕೆ ಎಂದು ತಿಳಿಸಿದರು.

ಬಾಗಲಕೋಟೆಯ 2 ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜಶೇಖರ ತಿಳಿಗಂಜಿ, ವೈದ್ಯಾಧಿಕಾರಿ ಡಾ. ನೀಲಾ ಕಾಶಿನಕುಂಟಿ ಅವರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಕಾರಾಗೃಹ ರಾಯಚೂರಿಗೆ ವರ್ಗಾವಣೆಗೊಂಡ ಜೈಲರ್‌ರಾದ ವೆಂಕಟೇಶ ಹಾಗೂ ಬೇರೆ ಕಾರಾಗೃಹಗಳಿಂದ ನೂತನವಾಗಿ ವರ್ಗಾವಣೆಗೊಂಡು ವರದಿ ಮಾಡಿಕೊಂಡ ಸಿಬ್ಬಂದಿಗಳಿಗೆ ಮತ್ತು ಸ್ವಾತಂತ್ರ್ಯೋತ್ಸವದ ಅಂಗವಾಗಿ ಕಾರಾಗೃಹದ ಬಂದಿಗಳಿಗೆ ಮನರಂಜನೆ ಕಾರ್ಯಕ್ರಮ ನೀಡಲು ಆಗಮಿಸಿದ ಹುಬ್ಬಳ್ಳಿಯ ವಿವಿಧ ಎನ್.ಜಿ.ಓ ರವರಿಗೆ ಸಂಸ್ಥೆಯ ಪರವಾಗಿ ಗೌರವಾನ್ವಿತರಿಂದ ಸನ್ಮಾನಿಸಲಾಯಿತು. ಉತ್ತಮವಾಗಿ ಸ್ವಚ್ಛತೆ ಕೆಲಸವನ್ನು ನಿರ್ವಹಿಸಿದ ಬಂದಿಗಳಿಗೆ ಬಹುಮಾನ ವಿತರಿಸಲಾಯಿತು. ಬಂದಿಗಳಿಗಾಗಿ ಹಮ್ಮಿಕೊಂಡ ಚೆಸ್, ಕ್ಯಾರಮ್ ಸ್ಪರ್ಧೆಯಲ್ಲಿ ವಿಜೇತರಾದ ಬಂಧಿಗಳಿಗೆ ಮುಖ್ಯ ಅತಿಥಿಗಳಿಂದ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಕಾರಾಗೃಹ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಬಂಧಿಗಳು ಹಾಜರಿದ್ದರು. ಲಕ್ಷ್ಮಿ ಗುಂಡ್ಲೂರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ವರದಿ ನಿತೀಶಗೌಡ ತಡಸ ಪಾಟೀಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ