LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನಿಲ್ಲದ ಹೃದಯಾಘಾತ : ನಿನ್ನೆ ಒಂದೇ ದಿನ ರಾಜ್ಯದಲ್ಲಿ 8 ಜನ ಸಾವು 

Advertisement
ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತದಿಂದ ಸಾವಿಗೀಡಾಗುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ನಿನ್ನೆ ಒಂದೇ ದಿನ ಕರ್ನಾಟಕದಲ್ಲಿ ಹೃದಯಾಘಾತದಿಂದ 8 ಮಂದಿ ಮೃತಪಟ್ಟಿದ್ದಾರೆ. ಹಾಸನ ಮತ್ತು ಚಿಕ್ಕಮಗಳೂರಿನಲ್ಲಿ ಇಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕೊಂಗಲಬೀಡು ಗ್ರಾಮದ ಆನಂದ್ (44) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಆನಂದ್​ ಐಚನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾಗಿದ್ದರು. ಶನಿವಾರ ರಾತ್ರಿ ಮನೆಯಲ್ಲಿ ಮಲಗಿದ್ದ ಆನಂದ್​ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಪತ್ನಿ ಬಳಿ ಎದೆ ನೋವುತ್ತಿದೆ ಎಂದು ಹೇಳಿದ್ದಾರೆ.

ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆಟೋ ಕರೆತರುವಷ್ಟರಲ್ಲಿ ಆನಂದ್​ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯಲ್ಲಿ ಕಳೆದ ಒಂದೂವರೆ ತಿಂಗಳಲ್ಲಿ 37 ಜನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಹಾಸನದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಕಾರಿನಲ್ಲಿ ತೆರಳುತ್ತಿದ್ದ ರಂಗನಾಥ್ (57) ಎಂಬುವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ರಂಗನಾಥ್​ ಅವರು ಕುಟುಂಬ ಸಮೇತ ಮಂಗಳೂರಿಗೆ ಪ್ರವಾಸಕ್ಕೆಂದು ಹೋಗಿದ್ದರು. ರವಿವಾರ ಪ್ರವಾಸ ಮುಗಿಸಿಕೊಂಡು ಬೆಂಗಳೂರಿಗೆ ಹಿಂದಿರುಗುತ್ತಿದ್ದರು. ರಂಗನಾಥ್​ ಅವರ ಪುತ್ರಿ ಕಾರು ಚಲಾಯಿಸುತ್ತಿದ್ದರು.

ಕಾರು ಹಾಸನ ಜಿಲ್ಲಾಧಿಕಾರಿ ಕಚೇರಿ ಸಮೀಪ ಬರುತ್ತಿದ್ದಂತೆ ರಂಗನಾಥ್‌ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಆದ್ದರಿಂದ, ರಂಗನಾಥ್​ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ರಂಗನಾಥ್​ ಅವರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಹಿಮ್ಸ್ ಆಸ್ಪತ್ರೆ ವೈದ್ಯರು ದೃಢಪಡಿಸಿದ್ದಾರೆ. ಮೃತ ರಂಗನಾಥ್ ಅವರು ಬೆಂಗಳೂರಿನ ಜಯನಗರದ‌ ನಿವಾಸಿಯಾಗಿದ್ದಾರೆ.

ಯಾದಗಿರಿ ತಾಲೂಕಿನ ಶೆಟ್ಟಿಕೇರಾ ಗ್ರಾಮದ ಹಳ್ಳೆಪ್ಪ ಪೂಜಾರಿ (44) ಎಂಬುವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೊಹರಂ ಅಗ್ನಿಕುಂಡ ತುಳಿದ ಕೆಲವೇ ಗಂಟೆಗಳಲ್ಲಿ ಹಳ್ಳೆಪ್ಪ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.

ಹುಬ್ಬಳ್ಳಿ ಕಿಮ್ಸ್​ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದ ಮಹಿಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಜೀರಮ್ಮ (53) ಮೃತ ದುರ್ದೈವಿ. ಕಿಮ್ಸ್​​ನಲ್ಲಿ ಆಯಾ ಆಗಿ ಕೆಲಸ ನಿರ್ವಹಿಸುತ್ತಿದ್ದ ನಜೀರಮ್ಮ ಇಂದು ಬೆಳಗ್ಗೆ ಆಸ್ಪತ್ರೆಯಲ್ಲೇ ಏಕಾಏಕಿ ಕುಸಿದುಬಿದ್ದು ಮೃತಪಟ್ಟಿದ್ದಾರೆ.

ಚಾಮರಾಜನಗರ ರಾಮಸಮುದ್ರ ಹೌಸಿಂಗ್‌ಬೋರ್ಡ್ ಕಾಲೋನಿ ನಿವಾಸಿ ಶಿವಕುಮಾರ್‌ (52) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶಿವಕುಮಾರ್ ಮನೆಯಲ್ಲಿ ಏಕಾಏಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಇಸಿಜಿ ಮಾಡುವಷ್ಟರಲ್ಲಿ ಶಿವಕುಮಾರ್ ಕೊನೆಯುಸಿರು ಎಳೆದಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಗ್ರಾಮದ ಯೋಧ ಗಂಗಾಧರಪ್ಪ (54) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಯೋಧ ಗಂಗಾಧರಪ್ಪ ಅವರು ಪಶ್ಚಿಮ ಬಂಗಾಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಯೋಧ ಗಂಗಾಧರಪ್ಪ ಇಂಡೋ ಟಿಬೇಟಿಯನ್ ಬಾರ್ಡರ್ ಫೋರ್ಸ್​ನಲ್ಲಿ ಹವಾಲ್ದಾರ್ ಆಗಿದ್ದರು. ಶನಿವಾರ ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ತೊಂಡೇಬಾವಿ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಂದೇ ದಿನ ಹೃದಯಾಘಾತಕ್ಕೆ ಇಬ್ಬರು ಮೃತಪಟ್ಟಿದ್ದಾರೆ. ಮೂಡಿಗೆರೆ ತಾಲೂಕಿನ ಬೆಳಗೋಡು ಗ್ರಾಮದ ಮೀನಾಕ್ಷಿ (29) ಮತ್ತು ಬಿ.ಹೊಸಳ್ಳಿ ಗ್ರಾಮದ ಸುಮಿತ್ರೆಗೌಡ (75) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೀನಾಕ್ಷಿ ಅವರಿಗೆ ಕಾರಿನಲ್ಲೇ ಎದೆನೋವು ಕಾಣಿಸಿಕೊಂಡು ಮೃತಪಟ್ಟಿದ್ದಾರೆ. ವೃದ್ಧ ಸುಮಿತ್ರೆಗೌಡ ಮನೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ