LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

30 ವರ್ಷಗಳ ಹಿಂದೆ 500 ರೂ. ಲಂಚ ಪಡೆದ ಪ್ರಕರಣ : 10 ವರ್ಷಗಳ ನಂತರ ಶಿಕ್ಷೆ

Advertisement
ಬೆಳಗಾವಿ: 30 ವರ್ಷಗಳ ಹಿಂದೆ 500 ರೂ. ಲಂಚ ಪಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿವೃತ್ತಿಯಾಗಿ 10 ವರ್ಷದ ಬಳಿಕ ಗ್ರಾಮ ಲೆಕ್ಕಾಧಿಕಾರಿಗೆ ಜೈಲು ಶಿಕ್ಷೆ ವಿಧಿಸಿರುವಂತಹ ವಿಚಿತ್ರ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಇನ್ನೊಂದು ವಿಚಿತ್ರ ವಿಚಾರವೆಂದರೆ ದೂರುದಾರರು ಕೂಡಾ ಮೃತಪಟ್ಟು 5 ವರ್ಷಗಳೇ ಕಳೆದಿವೆ.

ನಾಗೇಶ್ ಶಿವಂಗೇಕರ್ ಜೈಲು ಶಿಕ್ಷೆಗೆ ಒಳಗಾದ ನಿವೃತ್ತ ಗ್ರಾಮ ಲೆಕ್ಕಾಧಿಕಾರಿ. ನಾಗೇಶ್ ಶಿವಂಗೇಕರ್​ 30 ವರ್ಷ ಹಿಂದೆ ಪಹಣಿ ಪತ್ರದಲ್ಲಿ ವಾಟ್ನಿ ಮಾಡಿ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಈ ಬಗ್ಗೆ ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ಲಕ್ಷ್ಮಣ ಕಟಾಂಬಳೆ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಶಿವಂಗೇಕರ್ 500 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು.

ಈ ಘಟನೆ ಸಂಬಂಧ 2006ರಲ್ಲಿ ಶಿವಂಗೇಕರ್ ಅವರಿಗೆ ಒಂದು ವರ್ಷ ಜೈಲು ಮತ್ತು 1 ಸಾವಿರ ರೂ. ದಂಡ ವಿಧಿಸಲಾಗಿತ್ತು. ಬಳಿಕ ಧಾರವಾಡ ಹೈಕೋರ್ಟ್ ‌ಮೋರೆ ಹೋಗಿದ್ದ ನಾಗೇಶ್ ಶಿವಂಗೇಕರ್​ಗೆ ರಿಲೀಫ್ ಸಿಕ್ಕಿತ್ತು. ಆದರೆ ಹೈಕೋರ್ಟ್ ‌ಆದೇಶ ಪ್ರಶ್ನಿಸಿ ಲೋಕಾಯುಕ್ತ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು.

ಇಂದು ಸುಪ್ರೀಂ ಕೋರ್ಟ್ ಲೋಕಾಯುಕ್ತ ಪರ ಪರ ತೀರ್ಪು ಪ್ರಕಟಿಸಿದೆ. ಸದ್ಯ ಶಿವಂಗೇಕರ್ ನಿವೃತ್ತಿಯಾಗಿ 10 ವರ್ಷಗಳ ಬಳಿಕ ಈಗ ಜೈಲುಪಾಲಾಗಿದ್ದಾರೆ. ಬೆಳಗಾವಿ ಹಿಂಡಲಗಾ ಜೈಲಿಗೆ ನಾಗೇಶ್ ಶಿವಂಗೇಕರ್​​ನ್ನು ಲೋಕಾಯುಕ್ತ ಪೊಲೀಸರು ರವಾನಿಸಿದ್ದಾ ರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ