Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನರ ಮೇಲೆ ಕಲ್ಲು ಎಸೆದಿದ್ದಾನೆ ಎಂದು ದಲಿತ ಯುವಕನ ಬರ್ಬರ ಹತ್ಯೆ 

Advertisement
ಬಾಗಲಕೋಟೆ: ಜನರ ಮೇಲೆ ಕಲ್ಲು ಎಸೆದಿದ್ದಾನೆ ಎಂಬ ಕ್ಷುಲ್ಲಕ ಕಾರಣಕ್ಕಾಗಿ ದಲಿತ ಯುವಕನೊಬ್ಬನನ್ನು ಅಮಾನುಷವಾಗಿ ಹೊಡೆದು ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಘಟನೆಯ ಹಿನ್ನೆಲೆ

ಬುಧವಾರ ರಾತ್ರಿ ಸಾವಳಗಿ ಗ್ರಾಮದ ಸರ್ಕಾರಿ ಕನ್ನಡ ಹೆಣ್ಣುಮಕ್ಕಳ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಗ್ರಾಮಸ್ಥರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸುತ್ತಿದ್ದರು. ಪಂಚಾಯಿತಿ ಕಟ್ಟಡದ ಛಾವಣಿಯ ಮೇಲೆ ಕುಳಿತಿದ್ದ ಕೆಲವು ಯುವಕರಲ್ಲಿ ಯಾರೋ ಒಬ್ಬರು ಕೆಳಗೆ ಕುಳಿತಿದ್ದವರ ಮೇಲೆ ಸಣ್ಣ ಕಲ್ಲನ್ನು (ಹಳ್ಳು) ಎಸೆದಿದ್ದಾರೆ ಎನ್ನಲಾಗಿದೆ.

ಛಾವಣಿಯ ಮೇಲೆ ಕುಳಿತಿದ್ದ 19 ವರ್ಷದ ದಲಿತ ಯುವಕ ಸುದೀಪ್ ಬಸಪ್ಪ ಪಾಂಗಿ ಎಂಬಾತನೇ ಕಲ್ಲು ಎಸೆದಿದ್ದಾನೆ ಎಂದು ಆರೋಪಿಸಿ, ಆರೋಪಿಗಳು ಆತನೊಂದಿಗೆ ಜಗಳವಾಡಿದ್ದಾರೆ.

ಈ ವೇಳೆ ಸುದೀಪ್‌ಗೆ ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಮನಸೋಇಚ್ಛೆ ಥಳಿಸಿದ್ದಾರೆ.ತೀವ್ರವಾಗಿ ಗಾಯಗೊಂಡ ಸುದೀಪ್‌ನನ್ನು ತಕ್ಷಣ ಜಮಖಂಡಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ.

ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜು ಭೀಮಪ್ಪ ಮಾಳಿ, ವಿಜಯ ರಾಮಚಂದ್ರ ಸಾವಳಗಿ ಮತ್ತು ಮಲ್ಲಿಕಾರ್ಜುನ ನಿಂಗಪ್ಪ ಮಾಳಿ ಎಂಬ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಾವಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್