Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮ ಸ್ವಚ್ಛತೆಗಾಗಿ ತಿಂಗಳಲ್ಲಿ ಒಂದು ದಿನ ಮೀಸಲು: ಪಿಡಿಒ

Advertisement
ಐಗಳಿ:ನಮ್ಮ ಗ್ರಾಮವು ಸ್ವಚ್ಛ, ಹಸಿರು ಹಾಗೂ ಆರೋಗ್ಯವಂತ ಸಮಾಜವಾಗಿ ಬೆಳೆದರೆ ಮಾತ್ರ ಸುವ್ಯವಸ್ಥಿತ ಮತ್ತು ಸುಸ್ಥಿರ ಅಭಿವೃದ್ಧಿ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸಲು ಹಾಗೂ ಗ್ರಾಮೀಣ ಸಮುದಾಯದಲ್ಲಿ ಶುದ್ಧತೆಯ ಮಹತ್ವವನ್ನು ಸಾರಲು ಹಮ್ಮಿಕೊಂಡಿದ್ದ ಗ್ರಾಮ ಸ್ವಚ್ಛತಾ ಕಾರ್ಯಕ್ರಮವು ಉತ್ತಮ ಪ್ರತಿಕ್ರಿಯೆ ಪಡೆದಿದೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜೇಂದ್ರ ಪಾಠಕ್ ಅವರು ಹೇಳಿದರು.

ಡಾಕ್ಟರ್ ಬಾಬು ಜಗಜೀವನ್ ರಾಮ್ ಅವರ ಜಯಂತಿ ನಿಮಿತ್ಯವಾಗಿ ಶನಿವಾರದಂದು ಐಗಳಿ ಗ್ರಾಮದ ಪ್ರಮುಖ ಸ್ಥಳಗಳನ್ನು ಸ್ವಚ್ಛತೆಯ ಮಾಡುವುದರೊಂದಿಗೆ ಬಾಬು ಜಗಜೀವನ ಅವರ ಜಯಂತಿ ಉತ್ಸವವನ್ನು ಆಚರಣೆ ಮಾಡಿರುವುದು ಇದೊಂದು ಮಾದರಿಯ ಕಾರ್ಯಕ್ರಮವಾಗಿದೆ.



ಇಂದಿನಿಂದ ಪ್ರತಿ ತಿಂಗಳು ಮೂರನೇಯ ಶನಿವಾರದಂದು ಗ್ರಾಮ ಪಂಚಾಯಿತಿ ಅಧ್ಯಕ್ಷರು ಸದಸ್ಯರು ಹಾಗೂ ಅಭಿವೃದ್ಧಿ ಅಧಿಕಾರಿ ಮತ್ತು ಸಿಬ್ಬಂದಿಗಳು ಸ್ವ ಇಚ್ಛೆಯಿಂದ ಗ್ರಾಮವನ್ನು ಸ್ವಚ್ಛತೆ ಹಾಗೂ ಸುಂದರವಾಗಿಸಲು ಪಣ ತೊಟ್ಟಿದ್ದೇವೆ ಎಂದು ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಶಕುಂತಲಾ ಪಾಟೀಲ್ ಅವರು ತಿಳಿಸಿದರು.
ಈ ತರಹ ಕಾರ್ಯಕ್ರಮಗಳು ಗ್ರಾಮಸ್ಥರಲ್ಲಿ ಪ್ರಜ್ಞೆ ಜಾಗೃತಗೊಳಿಸುತ್ತವೆ ಹಾಗೂ ಸಮುದಾಯದಲ್ಲಿ ಸಕಾರಾತ್ಮಕ ಬದಲಾವಣೆಗೆ ದಾರಿ ಮಾಡಿಕೊಡುತ್ತವೆ.
ನಿಮ್ಮ ಈ ಶ್ರಮ ಹಾಗೂ ಶ್ರದ್ಧೆಗಿಂತ ದೊಡ್ಡ ಗೌರವವೇ ಇಲ್ಲ. ಗ್ರಾಮೀಣ ಪ್ರಜಾಪ್ರಭುತ್ವದ ಸತ್ವವನ್ನು ಜೀವನದಲ್ಲಿ ಅಳವಡಿಸಿಕೊಂಡು, ಗ್ರಾಮೀಣ ಅಭಿವೃದ್ಧಿಗೆ ಈಡಾಗುವ ಪ್ರತಿ ಹೆಜ್ಜೆ ಎಲ್ಲರಿಗೂ ಮಾದರಿಯಾಗಲಿ ಎಂದು ಇವರ ಕಾರ್ಯಕ್ಕೆ ಗ್ರಾಮಸ್ಥರು ಪ್ರಸಂಶ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಅಪ್ಪ ಸಾಬ್ ಪಾಟೀಲ್ ಧರೆಪ್ಪ ಮಾಳಿ ಹನುಮಂತ ತೆಲಸಂಗ ಗುತ್ತಿಗೆದಾರರು ಗ್ರಾಮ ಪಂಚಾಯತಿ ಸದಸ್ಯರಾದ ಸುರೇಶ್ ಬಿಜ್ಜರಗಿ ಸೋಮಣ್ಣ ಭಂಡಬಟ್ಟಿ ಗ್ರಾಮ ಪಂಚಾಯತಿ ಕಾರ್ಯದರ್ಶಿಯಾದ ಗಿರೀಶ್ ಅವಟಿ ಕ್ಲಾಕ್ ಅಪ್ಪು ಮದಬಾವಿ ಕರ ವಸಲಿಗಾರ ಮಾಳಪ್ಪ ಸತ್ತಿಗೇರಿ ಗ್ರಂಥಾಲಯ ಮೇಲ್ವಿಚಾರಕರು ಮಲ್ಲಿಕಾರ್ಜುನ ನಾವಿ ಸಿಬ್ಬಂದಿಗಳಾದ ಸಂತೋಷ ಮುಚ್ಚಂಡಿ ಬಸವರಾಜ್ ಬಾಡಿಗೆ ನಾಗೇಶ್ ಮಾಳಿ ಸೇರಿದಂತೆ ಇತರರು ಭಾಗಿಯಾಗಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ