Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಾಲೂಕು ಆಡಳಿತದಿಂದ ಕಾರ್ಮಿಕರಿಗಾಗಿ ಒಂದು ದಿನದ ಕಾರ್ಯಗಾರ

Advertisement
ಮಾನ್ವಿ:- ಪಟ್ಟಣದ ತಾಲೂಕು ಪಂಚಾಯಿತಿ ಭವನದಲ್ಲಿ ತಾಲೂಕು ಆಡಳಿತ , ತಾಲೂಕಾ ಕಾನೂನು ಸೇವ ಸಮಿತಿ ,ತಾ.ನ್ಯಾಯವಾದಿಗಳ ಸಂಘ , ಕಾರ್ಮಿಕ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಮಿಕ ಇಲಾಖೆಯಲ್ಲಿ ಕಾರ್ಮಿಕರಿಗಾಗಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಕಾರ್ಮಿಕ ಕಾಯ್ದೆಗಳ ಬಗ್ಗೆ ಹಾಗೂ ಯೋಜನೆಗಳು .

ಬಡತನ ನಿರ್ಮೂಲನೆ ಪರಿಣಾಮಕಾರಿ ಅನುಷ್ಠಾನದ ಕುರಿತು ನಡೆದ ಒಂದು ದಿನದ ಕಾರ್ಯಗಾರವನ್ನು ತಾ.ನ್ಯಾಯವಾದಿಗಳ ಸಂಘದ ತಾ.ಅಧ್ಯಕ್ಷರಾದ ರವಿಕುಮಾರಪಾಟೀಲ್ ಉದ್ಘಾಟಿಸಿ ಮಾತನಾಡಿ ನಮ್ಮ ಸಂವಿಧಾನದಲ್ಲಿ ಕಾರ್ಮಿಕರ ರಕ್ಷಣೆಗಾಗಿ ಅನೇಕ ಕಾನೂನುಗಳನ್ನು ನೀಡಲಾಗಿದೆ ಹಾಗೂ ಸರಕಾರದಿಂದ ಕಾರ್ಮಿಕರ ಕಲ್ಯಾಣಕ್ಕಾಗಿ ಕಾರ್ಮಿಕ ಇಲಾಖೆಯಿಂದ ಅನೇಕ ಯೋಜನೆಗಳನ್ನು ರೂಪಿಸಿದ್ದು ಅವುಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಾಗ ಮಾತ್ರ ಅವುಗಳ ಲಾಭವನ್ನು ಕಾರ್ಮಿಕರು ಪಡೆದುಕೊಳ್ಳುವುದಕ್ಕೆ ಸಾಧ್ಯವಾಗುತ್ತದೆ ಕಾರ್ಮಿಕರು ತಾಲೂಕಾ ಕಾನೂನು ಸೇವ ಸಮಿತಿಯ ಮೂಲಕ ಕಾನೂನಿನ ನೆರವನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ಪರಿಣಾಮಕಾರಿಯಾಗಿ ಬಡತನ ನಿರ್ಮೂಲನೆ ವಿಷಯದ ಕುರಿತು ಹಿರಿಯ ನ್ಯಾಯವಾದಿಗಳಾದ ವಿಶ್ವನಾಥ ಪಾಟೀಲ್ ಉಪನ್ಯಾಸ ನೀಡಿದರು. ಹಿರಿಯ ನ್ಯಾಯವಾದಿಗಳಾದ ಗುಂಡಮ್ಮ ಮೇಟಿ, ಸ್ಟೇಲ್ಲಾ ಶಾರ್ಲೆಟ್ ಕಾರ್ಮಿಕ ಕಾನೂನುಗಳ ಬಗ್ಗೆ ಹಾಗೂ ಕಾರ್ಮಿಕರಿಗೆ ವಿಮೇ ಸೌಲಭ್ಯ ಕುರಿತು ರಾಯಚೂರಿನ ಎಲ್.ಐ.ಸಿ.ವ್ಯವಸ್ಥಾಪಕರಾದ ಮಧುಸೂಧನ್ ತಾಲೂಕು ಕಾರ್ಮಿಕ ನಿರೀಕ್ಷಕರಾದ ಮಲ್ಲಪ್ಪ ದೊರೆ ಕಾರ್ಮಿಕರಿಗೆ ಹಾಗೂ ಅವರ ಕುಟುಂಬದವರಿಗೆ ಕಾರ್ಮಿಕ ಇಲಾಖೆಯಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಉಪತಹಸೀಲ್ದಾರ್ ವಿನಾಯಕರಾವ್, ತಾ.ಪಂ.ವ್ಯವಸ್ಥಾಪಕರಾದ ಬಸವರಾಜ,ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಚಂದ್ರಶೇಖರ .ಡಿ. ,ನಾಗರಾಜ,ಶ್ರೀಧರ ಸೇರಿದಂತೆ ತಾಲೂಕಿನ ವಿವಿಧ ಕಾರ್ಮಿಕ ಸಂಘಟನೆಗಳವರು ಕಾರ್ಮಿಕರು ಭಾಗವಹಿಸಿದರು.
ಮಾನ್ವಿ: ಪಟ್ಟಣದ ತಾಲೂಕು ಪಂಚಾಯಿತಿ ಭವನದಲ್ಲಿ ಕಾರ್ಮಿಕರಿಗಾಗಿ ನಡೆದ ಒಂದು ದಿನದ ಕಾರ್ಯಗಾರವನ್ನು ತಾ.ನ್ಯಾಯವಾದಿಗಳ ಸಂಘದ ತಾ.ಅಧ್ಯಕ್ಷರಾದ ರವಿಕುಮಾರಪಾಟೀಲ್ ಉದ್ಘಾಟಿಸಿದರು.

ವರದಿ:-ಶಿವತೇಜ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ