Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂದೂ ಧರ್ಮದ ಅವಹೇಳನ : ದೇವಸ್ಥಾನದಲ್ಲಿ ರಾಹುಲ್ ಭಾವಚಿತ್ರದ ಡೋರ್ ಮ್ಯಾಟ್ 

Advertisement
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಜುಲೈ 1 ರಂದು ಸಂಸತ್ತಿನಲ್ಲಿ ಮಾಡಿದ ಭಾಷಣದ ವೇಳೆ, ಹಿಂದೂ ಧರ್ಮ ಎಂದಿಗೂ ಹಿಂಸೆಯನ್ನು ಪ್ರತಿಪಾದಿಸುವುದಿಲ್ಲ. ಆದರೆ ಕೆಲವರು 24 ಗಂಟೆಗಳ ಕಾಲ ದ್ವೇಷದಲ್ಲಿಯೇ ಕಾಲ ಕಳೆಯುತ್ತಾರೆ ಎಂದು ಹೇಳಿದ್ದು, ಇದು ವಿವಾದಕ್ಕೆ ಕಾರಣವಾಗಿತ್ತು.

ರಾಹುಲ್ ಗಾಂಧಿಯವರ ಈ ಹೇಳಿಕೆಯನ್ನು ಸದನದಲ್ಲಿಯೇ ಬಲವಾಗಿ ವಿರೋಧಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರು, ಹಿಂಸಾವಾದಿಗಳು ಎಂದು ಹೇಳಿದ್ದು ಇಡೀ ಹಿಂದೂ ಸಮುದಾಯಕ್ಕೆ ಮಾಡಿದ ಅವಮಾನ ಎಂದಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ರಾಹುಲ್, ಬಿಜೆಪಿ ಸಮಸ್ತ ಹಿಂದೂ ಸಮುದಾಯವನ್ನು ಪ್ರತಿನಿಧಿಸುವುದಿಲ್ಲ ಎಂದು ತಿರುಗೇಟು ನೀಡಿದ್ದರು.

ಇದರ ಮಧ್ಯೆ ಮಹಾರಾಷ್ಟ್ರದ ದೇವಾಲಯ ಒಂದರಲ್ಲಿ ರಾಹುಲ್ ಭಾವಚಿತ್ರವನ್ನು ಡೋರ್ ಮ್ಯಾಟ್ ಆಗಿ ಬಳಸಿರುವುದು ಚರ್ಚೆಗೆ ಕಾರಣವಾಗಿದೆ. ಅಲ್ಲದೆ ಇದರಲ್ಲಿ ಹಿಂದೂ ಸಮುದಾಯವನ್ನು ಹಿಂಸಾವಾದಿಗಳೆಂದು ಹೇಳಲು ನಿಮಗೆಷ್ಟು ಧೈರ್ಯ ಎಂದು ಕೂಡ ಬರೆಯಲಾಗಿದೆ. ಇದಕ್ಕೆ ಈಗ ತರಹೇವಾರಿ ಕಾಮೆಂಟ್ ಗಳು ಹರಿದು ಬರುತ್ತಿವೆ.

ದೇವಾಲಯದ ಈ ಕಾರ್ಯಕ್ಕೆ ಹಲವರು ಮೆಚ್ಚಿಕೊಂಡಿದ್ದು, ಹಿಂದೂ ಸಮುದಾಯವನ್ನು ಹಿಂಸಾವಾದಿ ಎಂದು ಹೇಳಿದ ರಾಹುಲ್ ಗೆ ತಕ್ಕ ಪಾಠ ಎಂದಿದ್ದರೆ ಮತ್ತೆ ಕೆಲವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಈ ರೀತಿ ಮಾಡುವುದು ಸರಿಯಲ್ಲ.

ಅಲ್ಲದೆ ರಾಹುಲ್ ಗಾಂಧಿ ಸಮಸ್ತ ಹಿಂದೂ ಸಮಾಜ ಹಿಂಸಾವಾದಿಯಲ್ಲ. ಆದರೆ ಕೆಲವರು ಆ ಹೆಸರಿನಲ್ಲಿ ದ್ವೇಷ ಹರಡುತ್ತಿದ್ದಾರೆ ಎಂದಿದ್ದರು. ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರ ಸರಸ್ವತಿ ಕೂಡಾ ರಾಹುಲ್ ಹೇಳಿಕೆಯನ್ನು ಸಮರ್ಥಿಸಿದ್ದಾರೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 

 

 

 

 

 

 

 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ